Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

Sampriya
ಭಾನುವಾರ, 27 ಜುಲೈ 2025 (12:08 IST)
Photo Credit X
ಬೈಕ್ ಸವಾರನೊಬ್ಬ ಚಿರತೆ ದಾಳಿಯಿಂದ ಜೆಸ್ಟ್ ಎಸ್ಕೇಪ್ ಆಗಿರುವ ವಿಡಿಯೋವೊಂದು ಸಾಮಾಜಿಕ ಜಾಲ‌ತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಅಲಿಪಿರಿಯ ಝೂ ಪಾರ್ಕ್ ರಸ್ತೆಯಲ್ಲಿ ನಡೆದಿದೆ. 

ಆಂಧ್ರಪ್ರದೇಶದ ತಿರುಪತಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದೆ. ಆದರೆ ಇದೀಗ ಚಿರತೆ ದಾಳಿಯಿಂದ ಸವಾರನೊಬ್ಬ ಜೆಸ್ಟ್ ಎಸ್ಕೇಪ್ ಆಗಿದ್ದಾನೆ. 

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಅಲಿಪಿರಿಯ ಝೂ ಪಾರ್ಕ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ಮೇಲೆ ಏಕಾಏಕಿ ಚಿರತೆ ಎಗರಿದೆ. ಆದರೆ ಬೈಕ್ ವೇಗವಾಗಿ ಇದ್ದಿದ್ದರಿಂದ ಸವಾರ ಪ್ರಾಣಪಾಯದಿಂದ ಪಾರಾಗಿದ್ದಾನೆ. 

ಈ ಭಯಾನಕ ಘಟನೆಯನ್ನು ಕಾರಿನ ಹಿಂದೆ ಹಿಂಬಾಲಿಸಿದ ಡ್ಯಾಶ್‌ಕ್ಯಾಮ್‌ನಿಂದ ಸೆರೆಹಿಡಿಯಲಾಗಿದೆ ಮತ್ತು ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈ ಕಾಡು ಪ್ರಾಣಿಗಳಿಂದ ತಕ್ಷಣದ ಅಪಾಯವನ್ನು ಎತ್ತಿ ತೋರಿಸುತ್ತದೆ.

ಅದೇ ರಾತ್ರಿ, ಮಧ್ಯರಾತ್ರಿ, ಅರವಿಂದ್ ಕಣ್ಣಿನ ಆಸ್ಪತ್ರೆ ಬಳಿ ಚಿರತೆ ಮತ್ತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು, ನಿವಾಸಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ: ಕೇಂದ್ರ ಸಚಿವ ಎಚ್‌ಡಿಕೆ ವಾರ್ನಿಂಗ್‌

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಸಿದ್ದರಾಮಯ್ಯನವರ ಶಾಂತಿ ದೂತರೇ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ಎಸೆದಿದ್ದು: ಸಿಟಿ ರವಿ

ಮದ್ದೂರಿನಲ್ಲಿ ಗಣೇಶ ಗಲಾಟೆ: ಸಣ್ಣ ಘಟನೆ, ಕ್ರಮ ಕೈಗೊಂಡಿದ್ದೀವಿ ಎಂದ ಗೃಹಸಚಿವ ಪರಮೇಶ್ವರ್

ಮದ್ದೂರಿನಲ್ಲಿ ಗಣೇಶ ಗಲಾಟೆ: ಹಿಂದೂಗಳ ಮೇಲೆಯೇ ಯಾಕೀ ದಾಳಿ ಬಿವೈ ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments