Webdunia - Bharat's app for daily news and videos

Install App

ದೆಹಲಿಯಲ್ಲಿ ಬಿಜೆಪಿ ಗದ್ದುಗೆ ಏರುತ್ತಿದ್ದಂತೆ ಯಮುನಾ ನದಿಯ ಕಾಯಕಲ್ಪಕ್ಕೆ ಚಾಲನೆ

Sampriya
ಸೋಮವಾರ, 17 ಫೆಬ್ರವರಿ 2025 (14:29 IST)
Photo Courtesy X
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆ ಮಲಿನಗೊಂಡಿರುವ ಯಮುನಾ ನದಿಯ ಸ್ವಚ್ಛತಾ ಕಾರ್ಯ ಆರಂಭವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್‌ ನಾಯಕತ್ವದ ಆಪ್‌ ಆದ್ಮಿ ಪಕ್ಷಕ್ಕೆ ಸೋಲಾಗಿದೆ. 27 ವರ್ಷಗಳ ಬಳಿಕ ಬಿಜೆಪಿ ಬಹುಮತ ಪಡೆದಿದೆ. ಬಿಜೆಪಿಯು ಅಧಿಕಾರದ ಗದ್ದುಗೆಗೆ ಏರುವ ಮುನ್ನವೇ ಚುನಾವಣೆಯ ವೇಳೆ ನೀಡಿದ ಭರವಸೆಯಂತೆ ಯಮುನಾ ನದಿಗೆ ಕಾಯಕಲ್ಪ ನೀಡುವ ಕೆಲಸವನ್ನು ಶುರು ಮಾಡಿದೆ.

ಯಮುನಾ ನದಿಯನ್ನು ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು ಹಂತದ ಕಾರ್ಯತಂತ್ರವನ್ನು ಆಧರಿಸಿ ಭಾನುವಾರವೇ ಶುದ್ಧೀಕರಣ ಕಾರ್ಯ ಆರಂಭವಾಗಿದೆ. ನೀರಿನಿಂದ ಕಸ ತೆಗೆಯುವ ಯಂತ್ರಗಳು, ಕಳೆ ಕೊಯ್ಲು ಯಂತ್ರಗಳು, ಹೂಳೆತ್ತುವ ಸಾಧನಗಳು ಮತ್ತು ಡ್ರೆಡ್ಜರ್‌ನೊಂದಿಗೆ ಕೆಲಸಕ್ಕೆ ಚಾಲನೆ ನೀಡಲಾಗಿದೆ.

ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಮೋದಿ ಅವರು ದೆಹಲಿ ಜನತೆಗೆ ಕೃತಜ್ಞತೆ ಸಲ್ಲಿಸಿ, ಮಾಲಿನ್ಯ ಮುಕ್ತ ಯಮುನಾಗೆ ಪ್ರಯತ್ನ ಮಾಡುವುದಾಗಿ ಪುನರುಚ್ಚರಿಸಿದ್ದರು. ಅದರ ಬೆನ್ನಲ್ಲೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಶನಿವಾರ ಮುಖ್ಯ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನೀರಾವರಿ ಮತ್ತು ಪ್ರವಾಹ ನಿಯಂತ್ರಣ) ಅವರಿಗೆ ಯಮುನಾ ನದಿ ಶುಚಿಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶಿಸಿದರು.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments