Publish Date: Thu, 08 Sep 2022 (07:43 IST)
Updated Date: Wed, 07 Sep 2022 (22:47 IST)
ಜೈಪುರ : ಕೊರೊನಾದಿಂದ ತಪ್ಪಿಸಿಕೊಳ್ಳಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂಬುದು ನಿಯಮ.
ಆದರೆ ಜೀವ ರಕ್ಷಾಕವಚವಾದ ಅದೇ ಮಾಸ್ಕ್ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಆಗುವಂತೆ ಮಾಡಿದೆ.
ಹೌದು, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸೆಪ್ಟೆಂಬರ್ 2 ರಂದು ಜೈಸಲ್ಮೇರ್ ದೇವಾಲಯಕ್ಕೆ ಭೇಟಿ ನೀಡಿದ್ದಾಗ ಹಾಸ್ಯಕರ ಘಟನೆ ನಡೆದಿದೆ. ಮುಖಕ್ಕೆ ಹಾಕಿಕೊಂಡಿದ್ದ ಮಾಸ್ಕ್ ಅನ್ನು ಕಳಚಲು ಮರೆತ ಗೆಹ್ಲೋಟ್ ಮಾಸ್ಕ್ ಹಾಕಿಕೊಂಡೇ ತೀರ್ಥ ಪ್ರಸಾದವನ್ನು ಸೇವಿಸಿದ್ದಾರೆ.
ಗೆಹ್ಲೋಟ್ ಅವರು ಮಾಸ್ಕ್ ಧರಿಸಿಯೇ ತೀರ್ಥ ಸೇವಿಸಿರುವ ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ವೀಡಿಯೋ ವೀಕ್ಷಿಸಿದ ಅನೇಕರು ರಾಜಕೀಯದ ಆಟವಾಡಲು ಗೆಹ್ಲೋಟ್ ದೇವಾಲಯಕ್ಕೆ ಭೇಟಿ ನೀಡಿದ್ದಾಗಿ ಟೀಕಿಸಿದ್ದಾರೆ.