Webdunia - Bharat's app for daily news and videos

Install App

ಶ್ರದ್ಧಾ ವಾಲ್ಕರ್ ನೆನಪಿಸಿದ ಬೆಂಗಳೂರಿನ ಹತ್ಯೆ ಪ್ರಕರಣ: ಶ್ರದ್ಧಾ ಆರೋಪಿ ಕತೆ ಏನಾಗಿದೆ

Krishnaveni K
ಸೋಮವಾರ, 23 ಸೆಪ್ಟಂಬರ್ 2024 (09:37 IST)
ಬೆಂಗಳೂರು: ದೆಹಲಿಯ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ ಎಲ್ಲರಿಗೂ ನೆನಪಿರಬಹುದು. ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳನ್ನು ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿರಿಸಲಾಗಿತ್ತು.

ಇದೀಗ ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಮೂರು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನ್ಲಲಿರಿಸಲಾಗಿತ್ತು. ಈ ಪ್ರಕರಣ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಇಲ್ಲೂ ಆಕೆಯ ಪ್ರಿಯಕರನೇ ಕೊಲೆ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ.

ದೆಹಲಿಯ ಶ್ರದ್ಧಾಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ ಪ್ರಿಯಕರ ಸ್ನೇಹಿತ ಅಫ್ತಾಬ್ ಬಳಿಕ ಆಕೆಯ ಮೃತದೇಹವನ್ನು ಹಲವು ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದ. ಬಳಿಕ ಒಂದೊಂದೇ ತುಂಡನ್ನು ಪ್ರತಿನಿತ್ಯ ಎಂಬಂತೆ ನಿರ್ಜನ ಪ್ರದೇಶದಲ್ಲಿ ಎಸೆಯುತ್ತಿದ್ದ. ಈ ಪ್ರಕರಣದಲ್ಲಿ ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ಇದೀಗ ಆರೋಪಿ ತಿಹಾರ್ ಜೈಲಿನ ಸೆಲ್ ನಂ.4 ರಲ್ಲಿರಿಸಲಾಗಿದೆ. ಈತನ ಮೇಲೆ ಜೈಲು ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದಾರೆ. ಆತನಿಗೆ ಕೆಲವು ಗಂಟೆ ಕಾಲ ಮಾತ್ರ ಜೈಲಿನ ಹೊರಾವರಣದಲ್ಲಿ ವಾಕಿಂಗ್ ಗೆ ಅವಕಾಶವಿದೆ. ಉಳಿದಂತೆ ಜೈಲು ಕೊಠಡಿಯಲ್ಲೇ ಕಾಲ ಕಳೆಯಬೇಕಾಗಿದೆ. ಈತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಶ್ರದ್ಧಾ ತಂದೆ ಆಗ್ರಹಿಸುತ್ತಿದ್ದಾರೆ. 2022 ರಂದು ಈ ಘಟನೆ ನಡೆದಿತ್ತು. ಇದೀಗ ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಹತ್ಯೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ISRO: ಭೂ ವೀಕ್ಷಣಾ ಉಪಗ್ರಹ ಉಡ್ಡಯನ ವಿಫಲಕ್ಕೆ ಕಾರಣ ಬಿಚ್ಚಿಟ್ಟ ಅಧ್ಯಕ್ಷ ನಾರಾಯಣನ್‌

Karnataka Weather: ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಮುಂದಿನ ಸುದ್ದಿ
Show comments