ಬಿಹಾರದಲ್ಲಿ ಭೀಕರ ಅಪಘಾತ!

Webdunia
ಮಂಗಳವಾರ, 16 ನವೆಂಬರ್ 2021 (10:07 IST)
ಬಿಹಾರದ ಜಮುಯಿ ಎಂಬಲ್ಲಿ ಟ್ರಕ್ ಮತ್ತು ಎಸ್ಯುವಿ ವಾಹನದ ನಡುವೆ  ಭೀಕರ ಅಪಘಾತ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಹಾಗೇ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ,  ಪಿಪ್ರಾ ಎಂಬ ಹಳ್ಳಿಯ ಸಮೀಪ ಸಿಕಂದ್ರಾ-ಶೇಖ್ಪುರ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೃತಪಟ್ಟವರಲ್ಲಿ 5 ಮಂದಿ ಜಮುಯಿಯ ಖೈರಾ ಬ್ಲಾಕ್ನ ನೌದಿಹಾದವರು. ಮತ್ತೊಬ್ಬರು ಸ್ಥಳೀಯರಲ್ಲ. ಇವರೆಲ್ಲ ಜಮುಯಿ ಖೈರಾದಿಂದ ಪಾಟ್ನಾಕ್ಕೆ ಒಂದು ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ಅಪಘಾತ ಉಂಟಾಗಿದೆ. 
ಟ್ರಕ್ ಹಾಗೂ ಎಸ್ಯುವಿ ಡಿಕ್ಕಿಯ ರಭಸಕ್ಕೆ ಎಸ್ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಭೀಕರ ಅಪಘಾತವಾಗುತ್ತಿದ್ದಂತೆ ಒಂದೇ ಬಾರಿಗೆ ಅನೇಕರು ಸ್ಥಳದಲ್ಲಿ ಸೇರಿದ ಪರಿಣಾಮ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ವಿಷಯ ತಿಳಿಸಲಾಗಿದ್ದು, ಅವರೂ ಕೂಡ ಇಲ್ಲಿಗೆ ಆಗಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಮುಂದಿನ ಸುದ್ದಿ
Show comments