ಪ್ರಧಾನಿ ಮೋದಿ ವಿರುದ್ಧ ಕೈ ತೋರಿಸಿದ್ರೆ ಕತ್ತರಿಸಿಹಾಕ್ತೇವೆ: ಬಿಜೆಪಿ ಸಂಸದ

Webdunia
ಮಂಗಳವಾರ, 21 ನವೆಂಬರ್ 2017 (15:06 IST)
ಪ್ರಧಾನಿ ಮೋದಿ ವಿರುದ್ಧ ಯಾರಾದರೂ ಕೈ ತೋರಿಸಿದಲ್ಲಿ ಅವರ ಕೈಗಳನ್ನು ಕತ್ತರಿಸಿಹಾಕುತ್ತೇವೆ ಎಂದು ಬಿಜೆಪಿ ಸಂಸದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
 
ಬಿಹಾರ್‌ನ ಉಜಿಯಾಪುರ್ ಲೋಕಸಭಾ ಕ್ಷೇತ್ರದ ಸಂಸದರಾದ ನಿತ್ಯಾನಂದ್ ರಾಯ್, ಪ್ರಧಾನಿ ಮೋದಿ ದೇಶವನ್ನು ಅಭಿವೃದ್ಧಿಯತ್ತ ಪಥದತ್ತ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕಾರ್ಯಕ್ಕೆ ಅಡ್ಡಿಯಾದಲ್ಲಿ ತಕ್ಕ ಶಿಕ್ಷೆ ವಿಧಿಸುತ್ತೇವೆ ಎಂದು ಗುಡುಗಿದ್ದಾರೆ.
 
ಪ್ರಧಾನಿ ಮೋದಿ ವಿರುದ್ಧ ಯಾರೇ ಮಾತನಾಡಿದ್ರೂ ಅಥವಾ ಬೆರಳು ತೋರಿಸಿದರೂ ಅವರ ಬೆರಳುಗಳನ್ನು ಕತ್ತರಿಸಿ ಹಾಕುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
 
ಅವರ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ, ದೇಶದ ಗೌರವ ಮತ್ತು ಸುರಕ್ಷತೆಯ ವಿರುದ್ಧ ಧ್ವನಿ ಎತ್ತುವವರ ಬಗ್ಗೆ ಹೇಳಿದ್ದೇನೆ ಎಂದು ಉಲ್ಟಾ ಹೊಡೆದಿದ್ದಾರೆ. 
 
2016ರಲ್ಲಿ ನಿತ್ಯಾನಂದರನ್ನು ಬಿಹಾರನ ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನು ಜಾರಿಗೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಹಾರ್ ಬಿಜೆಪಿ ರಾಜ್ಯಾಧ್ಯಕ್ಷ ನಿತ್ಯಾನಂದ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments