Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಬಗ್ಗೆ ಟ್ವಿಟ್ಟರ್ನಲ್ಲಿ ತಿಳಿಸಿರುವ ಸಿಸೋಡಿಯಾ ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ ಎಂದು ಹೇಳಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರು ಹಾಗೂ ಸಿಸೋಡಿಯಾ ಆರೋಪಿಸಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.