Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಬಳಿಕ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಿಜೆಪಿಗೆ!

Krishnaveni K
ಬುಧವಾರ, 27 ಮಾರ್ಚ್ 2024 (10:34 IST)
Photo Courtesy: Twitter
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದ, ಅಧಿಕಾರಕ್ಕೆ ತರಲು ಶ್ರಮಿಸಿದ ಸಿಎಂ ರೇವಂತ್ ರೆಡ್ಡಿ ಲೋಕಸಭೆ ಚುನಾವಣೆ ಮುಗಿದ ಬಳಿಕ ಬಿಜೆಪಿ ಸೇರುತ್ತಾರಂತೆ! ಹೀಗೊಂದು ಹೇಳಿಕೆಯನ್ನು ಮಾಜಿ ಸಚಿವ ಕೆಟಿ ರಾಮ್ ರಾವ್ ಹೇಳಿದ್ದಾರೆ.

ರೇವಂತ್ ರೆಡ್ಡಿ ಇತ್ತೀಚೆಗೆ ಪ್ರಧಾನಿ ಮೋದಿಯ ಜೊತೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಮೋದಿಯನ್ನು ಹೊಗಳಿ ಅಣ್ಣನಂತೆ ಎಂದಿದ್ದರು. ಗುಜರಾತ್ ಮಾದರಿಯಂತೆ ನಮ್ಮ ರಾಜ್ಯವನ್ನೂ ಮಾದರಿ ರಾಜ್ಯ ಮಾಡುವುದಾಗಿ ಹೇಳಿದ್ದರು. ಅವರ ಈ ಹೇಳಿಕೆ ಕಾಂಗ್ರೆಸ್ಸಿಗರ ಹುಬ್ಬೇರುವಂತೆ ಮಾಡಿತ್ತು.

ಇದೀಗ ರೇವಂತ್ ಬಗ್ಗೆ ಮಾತನಾಡಿರುವ ಕೆಟಿ ರಾಮರಾವ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನವನ್ನು ಗೆಲ್ಲುವುದೂ ಕಷ್ಟ.  ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ರೇವಂತ್ ರೆಡ್ಡಿ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಬಿಜೆಪಿಗೆ ನಿಷ್ಠೆ ಬದಲಾಯಿಸಿದ ಮೊದಲ ಕಾಂಗ್ರೆಸ್ ನಾಯಕ ಎನಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ಅಲ್ಲದೆ ರೇವಂತ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಕೆಟಿ ರಾಮರಾವ್, ಲೋಕಸಭೆ ಚುನಾವಣೆಗೆ ಮುನ್ನ ರೇವಂತ್ ದೆಹಲಿಯಲ್ಲಿರುವ ತಮ್ಮ ಹೈಕಮಾಂಡ್ ಗೆ 2,500 ಕೋಟಿ ರೂ. ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments