Webdunia - Bharat's app for daily news and videos

Install App

ಲೋಕಸಭೆ ಕಲಾಪ ವೇಳೆ ರಾಹುಲ್ ಗಾಂಧಿ ಮಾತನಾಡಬೇಕೆಂದಾಗ ಮೈಕ್ ಆಫ್: ಕಾಂಗ್ರೆಸ್ ಆರೋಪ

Krishnaveni K
ಶುಕ್ರವಾರ, 28 ಜೂನ್ 2024 (17:51 IST)
ನವದೆಹಲಿ: ಇಂದು ಲೋಕಸಭೆಯಲ್ಲಿ ನೀಟ್ ಅಕ್ರಮದ ವಿಚಾರ ಆಡಳಿತ ಪಕ್ಷ ಮತ್ತು ವಿಪಕ್ಷ ನಾಯಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಈ ನಡುವೆ ನೀಟ್ ಅಕ್ರಮದ ವಿಚಾರದ ಬಗ್ಗೆ ಮಾತನಾಡಲು ಹೊರಟಾಗ ರಾಹುಲ್ ಗಾಂಧಿ ಮೈಕ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನೀಟ್ ಅಕ್ರಮದ ವಿಚಾರವಾಗಿ ಕಾಂಗ್ರೆಸ್ ರಚನಾತ್ಮಕ ಚರ್ಚೆ ನಡೆಸಲು ಉದ್ದೇಶಿಸಿತ್ತು. ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಈ ಬಗ್ಗೆ ಕಾಂಗ್ರೆಸ್ ಚರ್ಚೆ ಮಾಡಲು ಬಯಸಿದರೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಅದನ್ನು ಸದನದಲ್ಲಿ ಪ್ರಸ್ತಾಪಿಸಲು ಹೊರಟಾಗ ವಿಪಕ್ಷ ನಾಯಕನ ಮೈಕ್ ಆಫ್ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಆರೋಪಿಸಿದ್ದಾರೆ.

ನೀಟ್ ಅಕ್ರಮದ ವಿಚಾರವಾಗಿ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ತಾರಕಕ್ಕೇರಿದಾಗ ಸ್ಪೀಕರ್ ಓಂ ಬಿರ್ಲಾ ಸದನವನ್ನು ಸೋಮವಾರಕ್ಕೆ ಮುಂದೂಡಿದರು. ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯ ಕೈಗೊಳ್ಳಲು ಸಮಯ ನಿಗದಿ ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಇಂದು ಇತರ ವ್ಯವಹಾರಗಳನ್ನು ಅಮಾನತುಗೊಳಿಸಿ ನೀಟ್ ಸಮಸ್ಯೆಗಳ ಬಗ್ಗೆ ತಕ್ಷಣ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಕೋರಿತು. ಆದರೆ ಇದಕ್ಕೆ ಸ್ಪೀಕರ್ ಓಂ ಬಿರ್ಲಾ ಅವಕಾಶ ಕೊಡಲಿಲ್ಲ.

ಈಗ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಪ್ರಕ್ರಿಯೆ ಅಷ್ಟೇ ನಡೆಯಲಿದೆ ಎಂದರು. ಇದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು. ಈ ವೇಳೆ ಗದ್ದಲದ ವಾತಾವರಣವುಂಟಾಯಿತು. ನೀಟ್ ವಿಚಾರವಾಗಿ ಗೌರವಯುತವಾಗಿ ಚರ್ಚೆಯಾಗಬೇಕು ಎಂದು ನಾವು ಬಯಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments