Webdunia - Bharat's app for daily news and videos

Install App

ಕಾಂಗ್ರೆಸ್‌ನಿಂದ ವಯನಾಡಿನಲ್ಲಿ 100 ಮನೆಗಳ ನಿರ್ಮಾಣ: ರಾಹುಲ್ ಗಾಂಧಿ

Sampriya
ಶುಕ್ರವಾರ, 2 ಆಗಸ್ಟ್ 2024 (20:48 IST)
ಕೇರಳ: ನಾನು ನಿನ್ನೆಯಿಂದ ಇಲ್ಲಿದ್ದೇನೆ. ಇದು ಭೀಕರ ದುರಂತ.  ದುರಂತದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡೆವು. ನಿರಾಶ್ರಿಯರ ಜತೆ ಮಾತುಕತೆ ನಡೆಸಿದ್ದು, ನಾವು ಅವರಿಗೆ 100ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ಶುಕ್ರವಾರ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಪುಂಚಿರಿ ಮಟ್ಟಂ ಗ್ರಾಮಕ್ಕೆ ಭೇಟಿ ನೀಡಿದರು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಪಕ್ಷದ ನಾಯಕರಿಗೆ ಜಿಲ್ಲಾಡಳಿತ ಮತ್ತು ಅರಣ್ಯಾಧಿಕಾರಿಗಳು ಕೇರಳದ ವಯನಾಡಿನ ಮೆಪ್ಪಾಡಿಯ ಚೂರಲ್ಮಲಾದಲ್ಲಿ ಮಾಹಿತಿ ನೀಡಿದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಿರಾಶ್ರಿತರಿಗೆ ಈ ಪ್ರದೇಶದಲ್ಲಿ 100ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದರು.

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಮನೆ ಕಳೆದುಕೊಂಡ 150 ಕುಟುಂಬಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಾಗಿ ಮನೆಗಳನ್ನು ನಿರ್ಮಿಸಲಿದೆ ಎಂದು ಕೇರಳದ ಉನ್ನತ ಶಿಕ್ಷಣ ಇಲಾಖೆ ಸಚಿವ ಆರ್ ಬಿಂದು ಶುಕ್ರವಾರ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments