Webdunia - Bharat's app for daily news and videos

Install App

ಮರಣದಂಡನೆ : ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

Webdunia
ಶುಕ್ರವಾರ, 24 ಮಾರ್ಚ್ 2023 (14:11 IST)
ನವದೆಹಲಿ : ಮರಣದಂಡನೆ ಶಿಕ್ಷೆಯನ್ನು ಜಾರಿಗೆ ತರಲು ನೇಣು ಹಾಕುವ ಮರಣವು ಅತ್ಯಂತ ಸೂಕ್ತವಾದ ಮತ್ತು ನೋವುರಹಿತ ವಿಧಾನವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ನೇಣು ಹಾಕುವ ಮೂಲಕ ಹೊಂದುವ ಮರಣದ ಸಮಯದಲ್ಲಿ ಉಂಟಾಗುವ ಪರಿಣಾಮ ಮತ್ತು ನೋವಿನ ಬಗ್ಗೆ ಯಾವುದೇ ಡೇಟಾ ಅಥವಾ ಅಧ್ಯಯನವನ್ನು ಕೈಗೊಳ್ಳಲಾಗಿದೆಯೇ ಎಂಬುದರ ವಿವರಗಳನ್ನು ನೀಡುವಂತೆ ಕೇಳಿದೆ.

ನೇಣು ಹಾಕುವಿಕೆಯಿಂದ ಉಂಟಾಗುವ ಸಾವಿನ ಪರಿಣಾಮ, ನೋವು ಉಂಟಾದಾಗ ಸಾವು ಸಂಭವಿಸಲು ತೆಗೆದುಕೊಂಡ ಅವಧಿ, ನೇಣು ಹಾಕುವಿಕೆಯನ್ನು ಜಾರಿಗೆ ತರಲು ಸಂಪನ್ಮೂಲಗಳ ಲಭ್ಯತೆಯ ಬಗ್ಗೆ ಮಾಹಿತಿ ನೀಡಬೇಕು. ಇದರ ಜೊತೆಗೆ ಇಂದಿನ ವಿಜ್ಞಾನದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯಲು ಇದಕ್ಕಿಂತ ಸೂಕ್ತವಾದ ಇನ್ನೊಂದು ವಿಧಾನವಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಕೇಳಿದೆ. 

ಒಂದು ವೇಳೆ ಸರ್ಕಾರ ಅಂತಹ ಅಧ್ಯಯನವನ್ನು ಕೈಗೊಳ್ಳದಿದ್ದರೆ ಅದರ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ ಸಮಿತಿಯನ್ನು ರಚಿಸಬಹುದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಕೇಂದ್ರವು ಈ ಅಧ್ಯಯನವನ್ನು ಮಾಡದಿದ್ದರೆ, ಎನ್ಎಲ್ಯು ದೆಹಲಿ, ಬೆಂಗಳೂರು ಅಥವಾ ಹೈದರಾಬಾದ್ನಂತಹ ಎರಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ತಜ್ಞರು, ಎಐಐಎಂಎಸ್ನ ಕೆಲವು ವೈದ್ಯರು, ವೈಜ್ಞಾನಿಕ ತಜ್ಞರಿರುವ ಸಮಿತಿಯನ್ನು ನಾವು ರಚಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments