Webdunia - Bharat's app for daily news and videos

Install App

ಅಣ್ಣಾಮಲೈ ಸೋಲನ್ನು ಬಿರಿಯಾನಿ ಹಂಚಿ ಸಂಭ್ರಮಿಸಿದ ಡಿಎಂಕೆ ನಾಯಕರು

sampriya
ಮಂಗಳವಾರ, 4 ಜೂನ್ 2024 (19:48 IST)
Photo By X
ಕೊಯಂಬತ್ತೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲ್ಲುವ ಕುದುರೆಯ ಪಟ್ಟಿಯಲ್ಲಿದ್ದ ಅಣ್ಣಾಮಲೈ ಅವರಿಗೆ ಅವರ ಹುಟ್ಟು ಹಬ್ಬದ ದಿನವೇ ಸೋಲಿನ ಕಹಿ ಅನುಭವಾಗಿದೆ.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಂಬತ್ತೂರು ಲೋಕಸಭಾ ಕ್ಷೇತ್ರದಲ್ಲಿ ಸೋಲಾಗಿದೆ.

ಡಿಎಂಕೆ ಅಭ್ಯರ್ಥಿ ಪಿ. ಗಣಪತಿ ರಾಜ್​ಕುಮಾರ್​ ಎದುರು 73,696 ಮತಗಳ ಅಂತರದಲ್ಲಿ ಅಣ್ಣಾಮಲೈಗೆ ಸೋಲು ಖಚಿತವಾಗುತ್ತಿದ್ದ ಹಾಗೇ ಡಿಎಂಕೆ ನಾಯಕರು ಮಟನ್​ ಬಿರಿಯಾನಿ ಹಂಚಿ ಸಂಭ್ರಮಿಸಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ವಿಡಿಯೋದಲ್ಲಿ ಡಿಎಂಕೆ ಕಾರ್ಯಕರ್ತರು ಮೇಕೆಯ ಕೊರಳಲ್ಲಿ ಅಣ್ಣಾಮಲೈ ಫೋಟೋವನ್ನು ನೇತುಹಾಕಿ ಮೆರವಣಿಗೆ ಮಾಡುತ್ತಿರುವುದನ್ನು ನೋಡಬಹುದಾಗಿದೆ.

ಬಳಿಕ ಮಟನ್​ ಬಿರಿಯಾನಿ ಹಂಚಿ ಡಿಎಂಕೆ ನಾಯಕರು ಮಟನ್​ ಬಿರಿಯಾನಿ ಹಂಚಿ ಅಣ್ಣಾಮಲೈ ಸಿಂಘಂ ಅಲ್ಲಾ ಆಡು ಎಂದು ಲೇವಡಿ ಮಾಡುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments