Webdunia - Bharat's app for daily news and videos

Install App

ಸನಾತನ ಧರ್ಮವನ್ನು ಡೆಂಗ್ಯೂಗೆ ಹೋಲಿಸಿದ್ದ ಉದಯನಿಧಿಗೆ ಡಿಸಿಎಂ ಪಟ್ಟಕ್ಕೆ ಸ್ವಪಕ್ಷೀಯರಿಂದಲೇ ವಿರೋಧ

Krishnaveni K
ಸೋಮವಾರ, 30 ಸೆಪ್ಟಂಬರ್ 2024 (16:31 IST)
Photo Credit: X
ಚೆನ್ನೈ: ಸನಾತನ ಧರ್ಮ ಎಂದರೆ ಡೆಂಗ್ಯೂ, ಮಲೇರಿಯಾದಂತೆ ಡೇಂಜರ್ ಎಂದು ಅವಹೇಳನ ಮಾಡಿದ್ದ ಉದಯನಿಧಿ ಈಗ ತಮಿಳುನಾಡು ಉಪಮುಖ್ಯಮಂತ್ರಿಯಾಗಿದ್ದಾರೆ.

ಮುಖ್ಯಮಂತ್ರಿ ಸ್ಟಾಲಿನ್ ತಮ್ಮ ಪುತ್ರ ಉದಯನಿಧಿಗೆ ಪಟ್ಟ ಕಟ್ಟಿದ್ದು, ಭವಿಷ್ಯದಲ್ಲಿ ತಮ್ಮ ಉತ್ತರಾಧಿಕಾರಿ ಎಂದು ಸೂಚನೆ ನೀಡಿದ್ದಾರೆ. ಕರುಣಾನಿಧಿ ಬಳಿಕ ಡಿಎಂಕೆ ಪಕ್ಷದ ಚುಕ್ಕಾಣಿ ಹಿಡಿದಿದ್ದ ಸ್ಟಾಲಿನ್ ಬಳಿಕ ಮುಖ್ಯಮಂತ್ರಿಯಾದರು. ಈಗ ಉದಯನಿಧಿಗೆ ಉಪಮುಖ್ಯಮಂತ್ರಿ ಪಟ್ಟಿ ಕಟ್ಟಲಾಗಿದ್ದು, ಮುಂದೆ ಅವರೇ ಡಿಎಂಕೆಯ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವುದು ಖಚಿತವಾಗಿದೆ.

ಆದರೆ ಉದಯನಿಧಿಯನ್ನು ಉಪಮುಖ್ಯಮಂತ್ರಿ ಮಾಡಿದ್ದು ಪಕ್ಷದೊಳಗೇ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಉದಯನಿಧಿಗೆ ಸಚಿವ ಸ್ಥಾನ ನೀಡಿದ್ದಕ್ಕೇ ಡಿಎಂಕೆಯ ಕೆಲವು ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಉಪಮುಖ್ಯಮಂತ್ರಿ ಪಟ್ಟ ನೀಡಿರುವುದು ಅಸಮಾಧಾನ ಹೆಚ್ಚುವಂತೆ ಮಾಡಿದೆ.

ತಮಿಳುನಾಡು ಹಾಲಿ ಸಿಎಂ ಸ್ಟಾಲಿನ್ ಆರೋಗ್ಯ ಈಗ ಮೊದಲಿನಷ್ಟು ಚೆನ್ನಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಅವರು ಮಗನಿಗೆ ಪಟ್ಟ ಕಟ್ಟಿದ್ದಾರೆ. ಅಂದರೆ ಮುಂದಿನ ದಿನಗಳಲ್ಲಿ ತಮ್ಮ ಆರೋಗ್ಯ ಕೈಕೊಟ್ಟರೆ ಉದಯನಿಧಿಗೇ ಮುಖ್ಯಮಂತ್ರಿ ಪಟ್ಟ ನೀಡುವುದು ಗ್ಯಾರಂಟಿಯಾಗಿದೆ. ಹೀಗಾಗಿ ಕೆಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments