Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : ಪತ್ನಿ ತವರು ಮನೆಯಿಂದ ವರದಕ್ಷಿಣೆ ತಂದಿಲ್ಲ ಎಂದು ಪತಿ ಕಿರುಕುಳ ನೀಡಿ ಆ್ಯಸಿಡ್ ಕುಡಿಸಿ ಆಕೆಯನ್ನು ಕೊಂದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತೆಯನ್ನು ರೇಷ್ಮಾ ಎಂದು ಗುರುತಿಸಲಾಗಿದೆ. ಈಕೆಗೆ ತವರು ಮನೆಯಿಂದ ವರದಕ್ಷಿಣೆ ತಂದಿಲ್ಲವೆಂದು ಪತಿ ಮತ್ತು ಆತನ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು.
ವರದಕ್ಷಿಣೆ ನೀಡುವಂತೆ ರೇಷ್ಮಾ ಪತಿ ಮನೆಯವರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು. ಒಂದು ದಿನ ಚಿತ್ರ ಹಿಂಸೆ ನೀಡಿದ್ದಾರೆ. ಆಕೆ ಪತಿ ಹಾಗೂ ಮನೆ ಮಂದಿ ಎಲ್ಲರೂ ಸೇರಿ ಆಕೆಗೆ ಆ್ಯಸಿಡ್ ಕುಡಿಸಿದ್ದಾರೆ.
ಗಂಡನ ಮನೆಯಲ್ಲಿ ರೇಷ್ಮಾ ಮೃತದೇಹವನ್ನು ವಶಪಡಿಸಿಕೊಂಡಾಗ ಆಕೆಯ ಮುಖದ ಮೇಲೆ ಸುಟ್ಟ ಗಾಯದ ಗುರುತುಗಳಿದ್ದವು. ಕುಟುಂಬಸ್ಥರು ದೂರು ನೀಡಿದ್ದಾರೆ ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.