Webdunia - Bharat's app for daily news and videos

Install App

ಅಸ್ಸಾಂನಲ್ಲಿ ಭೂಕಂಪನ: ಪ್ರಾಣ ಉಳಿಸಲು ಮನೆಯಿಂದ ಓಡೋಡಿ ಹೊರಬಂದ ಜನ

Sampriya
ಗುರುವಾರ, 27 ಫೆಬ್ರವರಿ 2025 (14:22 IST)
Photo Courtesy X
ಅಸ್ಸಾಂ: ಇಲ್ಲಿನ ಮೊರಿಗಾಂವ್ ಜಿಲ್ಲೆಯಲ್ಲಿ ಇಂದು ಮುಂಜಾನೆ 5ರಷ್ಟು ಭೂಕಂಪ ಸಂಭವಿಸಿದೆ. ಈ ವೇಳೆ ಭಯಗೊಂಡು ಹಲವು ಮಂದಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಅಸ್ಸಾಂನ ರಾಜಧಾನಿ ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲೂ ಭೂಕಂಪನದ ಅನುಭವವಾಗಿದೆ. ರಿಕ್ಟರ್​ ಮಾಪಕದಲ್ಲಿ 5 ರ ತೀವ್ರತೆ ದಾಖಲಾಗಿದ್ದು, ಈ ಭೂಕಂಪವನ್ನು ಮಧ್ಯಮ ತೀವ್ರತೆಯ ಕಂಪನ ಎಂದು ಪರಿಗಣಿಸಲಾಗುತ್ತದೆ.  ಭೂಮಿ ಕಂಪಿಸಿದ್ದರಿಂದ ಮನೆಯ ಒಳಾಂಗಣ ವಸ್ತುಗಳು ಅಲುಗಾಡಿರುವುದು ಕಂಡು ಬಂದಿದೆ.  ಆದರೆ, ಯಾವುದೇ ಸಾವು ನೋವು ಈತನಕ ವರದಿಯಾಗಿಲ್ಲ.

ಭೂಕಂಪನ ಚಟುವಟಿಕೆಯ ಕೇಂದ್ರಬಿಂದು ಮತ್ತು ಪ್ರಭಾವದ ಬಗ್ಗೆ ವಿವರಗಳು ತಕ್ಷಣವೇ ಸ್ಪಷ್ಟವಾಗಿಲ್ಲ. ಭೂಮಿಯ 16 ಕಿಲೋಮೀಟರ್ ಆಳದಲ್ಲಿ ಭೂಕಂಪವು ಆಗಿದ್ದು, ತಡರಾತ್ರಿ ಸುಮಾರು 2:25 ಗಂಟೆಗೆ ಈ ಕಂಪನ ಸಂಭವಿಸಿದೆ ಎಂದು ಭೂಕಂಪ ಮಾನಿಟರಿಂಗ್ ಏಜೆನ್ಸಿ ಮೂಲಗಳು ತಿಳಿಸಿವೆ.

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಈ ಭೂಕಂಪ ಸಂಭವಿದೆ. ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಹಲವಾರು ಭಾಗಗಳಲ್ಲಿ ಕಂಪನದ ಅನುಭವವಾಗಿತ್ತು. ಫೆಬ್ರವರಿ 25ರಂದು ಬೆಳಗ್ಗೆ ಕಂಪನ ಉಂಟಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments