Webdunia - Bharat's app for daily news and videos

Install App

ಮೂರನೇ ದಿನಕ್ಕೆ ಕಾಲಿಟ್ಟ ರೈತ ಪ್ರತಿಭಟನೆ

Krishnaveni K
ಗುರುವಾರ, 15 ಫೆಬ್ರವರಿ 2024 (10:03 IST)
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ರೈತ ಸಂಘಟನೆಗಳ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಪಂಜಾಬ್ ನಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಮೊದಲ ದಿನ ರೈತರು ದೆಹಲಿಗೆ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆಯಾಗಿದೆ.  ರೈತರು ದೆಹಲಿ ಪ್ರವೇಶಿಸದಂತೆ ಪೊಲೀಸರು ಬ್ಯಾರಿಕೇಡ್, ಮುಳ್ಳಿನ ತಂತಿ,  ಜಲಫಿರಂಗಿ, ಅಶ್ರವಾಯು ಜೊತೆಗೆ ಶಬ್ದಾಸ್ತ್ರವನ್ನೂ ಬಳಸಿದ್ದಾರೆ. ಒಂದೆಡೆ ಪೊಲೀಸರು ಡ್ರೋಣ್ ಮೂಲಕ ಅಶ್ರವಾಯು ಸಿಡಿಸಿದರೆ ರೈತರು ಅದನ್ನು ತಡೆಯಲು ಗಾಳಿಪಟದ ನೆರವು ಪಡೆದಿದ್ದಾರೆ.

ರೈತ ಪ್ರತಿಭಟನೆಯಿಂದಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿದೆ.  ದೆಹಲಿಗೆ ಬರುವ ಗಡಿ ಮಾರ್ಗಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಇದರಿಂದಾಗಿ ರೈತರಿಗೆ ಟ್ರ್ಯಾಕ್ಟರ್ ನುಗ್ಗಿಸಲು ಸಾಧ‍್ಯವಾಗಿಲ್ಲ. ರೈತರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪಿಸಬೇಕು ಎಂಬುದು ರೈತರ ಮುಖ್ಯ ಬೇಡಿಕೆಯಾಗಿದೆ. ಇದರ ಜೊತೆಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಅನುಷ್ಠಾನಗೊಳಿಸಬೇಕು, ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಸಂತ್ರಸ್ತರಾದವರಿಗೆ ನೆರವಾಗಬೇಕು ಎಂಬಿತ್ಯಾದಿ ಬೇಡಿಕೆಗಳನ್ನಿಟ್ಟುಕೊಂಡು ರೈತರು ಹೋರಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments