Publish Date: Sun, 19 Jun 2022 (10:17 IST)
Updated Date: Sun, 19 Jun 2022 (10:19 IST)
ಶ್ರೀನಗರ : ರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಿರಸ್ಕರಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಸೂಚಿಸಿದ್ದರು. ಆದರೆ ಫಾರೂಕ್ ಅಬ್ದುಲ್ಲಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಹಾಗೂ ಜಮ್ಮು-ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತಾರೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಈಗಿನ ಪರಿಸ್ಥಿತಿಯಲ್ಲಿ ನನ್ನ ಸಹಕಾರದ ಅಗತ್ಯವಿದೆ. ಮುಂದೆ ನನಗೆ ರಾಜಕೀಯದಲ್ಲಿ ಹಾಗೂ ಸೇವೆಯಲ್ಲಿ ಹೇರಳ ಅವಕಾಶವಿದೆ. ಹೀಗಾಗಿ ನಾನು ರಾಷ್ಟ್ರಪತಿ ಚುನಾವಣೆಗೆ ನನ್ನ ಹೆಸರನ್ನು ಹಿಂಪಡೆಯಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.
Ramya kosira
Publish Date: Sun, 19 Jun 2022 (10:17 IST)
Updated Date: Sun, 19 Jun 2022 (10:19 IST)