Webdunia - Bharat's app for daily news and videos

Install App

ಕುಂಭಮೇಳಕ್ಕೆ ಹೋಗಬೇಕಾ, ಉಚಿತ ಟ್ರೈನ್ ವ್ಯವಸ್ಥೆ ಮಾಡಿದ ರಾಜ್ಯ

Krishnaveni K
ಗುರುವಾರ, 6 ಫೆಬ್ರವರಿ 2025 (14:32 IST)
ಪಣಜಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಲು ಈ ರಾಜ್ಯ ಸಾರ್ವಜನಿಕರಿಗೆ ಉಚಿತ ರೈಲಿನ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಘೋಷಣೆ ಮಾಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಾಕಷ್ಟು ಜನ ದೇಶದ ನಾನಾ ಭಾಗಗಳಿಂದ ಭಾಗಿಯಾಗುತ್ತಿದ್ದಾರೆ. ಕುಂಭಮೇಳಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗಿರುವುದರಿಂದ ವಿಮಾನ ಪ್ರಯಾಣ ದುಬಾರಿಯಾಗಿದೆ.

ಇನ್ನು ರೈಲುಗಳಲ್ಲಿ ಕಾಲು ಹಾಕಲೂ ಸ್ಥಳವಿಲ್ಲದಷ್ಟು ರಶ್ ಇದೆ. ಹೀಗಾಗಿ ಕುಂಭಮೇಳಕ್ಕೆ ಹೋಗಬೇಕೆಂದರೂ ಕೆಲವರಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅಂತಹವರಿಗಾಗಿ ಗೋವಾ ಸರ್ಕಾರ ಉಚಿತ ರೈಲಿನ ವ್ಯವಸ್ಥೆ ಮಾಡಿಕೊಟ್ಟಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ರಾಜ್ಯದಲ್ಲಿ ಪ್ರಯಾಗ್ ರಾಜ್ ಗೆ ತೆರಳುವವರಿಗಾಗಿ ಮೂರು ಉಚಿತ ರೈಲಿನ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಂದು ಬೆಳಿಗ್ಗೆ ಮೊದಲ ಟ್ರೈನ್ ಪ್ರಯಾಗ್ ರಾಜ್ ನತ್ತ ಪ್ರಯಾಣ ಬೆಳೆಸಿದೆ. ಇನ್ನು ಫೆಬ್ರವರಿ 13 ಮತ್ತು 21 ರಂದು ಬೆಳಿಗ್ಗೆ 8 ಗಂಟೆಗೆ ಗೋವಾದ ಮಾರ್ಗೋವಾ ನಿಲ್ದಾಣದಿಂದ ರಯಲು ಹೊರಡಲಿದೆ. ಈ ರೈಲು ಸುಮಾರು 1,000 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಒಂದು ದಿನ ಪ್ರಯಾಗ್ ರಾಜ್ ನಲ್ಲಿದ್ದು ಮರಳಿ ಬರಲು ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments