Webdunia - Bharat's app for daily news and videos

Install App

ಪೆಹಲ್ಗಾಮ್ ಮಾರಣಹೋಮದ ಬೆನ್ನಲ್ಲೇ 48 ಪ್ರವಾಸಿ ತಾಣಗಳಿಗೆ ಬಾಗಿಲು ಹಾಕಿದ ಸರ್ಕಾರ

Sampriya
ಮಂಗಳವಾರ, 29 ಏಪ್ರಿಲ್ 2025 (14:48 IST)
Photo Courtesy X
ಶ್ರೀನಗರ: ಪೆಹಲ್ಗಾಮ್‌ನಲ್ಲಿ ಐದು ದಿನಗಳ ಹಿಂದೆ ನಡೆದ 26 ಜನರ ಮಾರಣಹೋಮದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಎಚ್ಚೆತ್ತುಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ
ತಮ್ಮ 48 ಪ್ರವಾಸಿ ತಾಣಗಳಿಗೆ ಬಾಗಿಲು ಹಾಕಿದೆ.

ಒಂದು ವಾರದ ಹಿಂದೆ ಪಹಲ್ಗಾಮ್ ಪಟ್ಟಣವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಮಾರುಕಟ್ಟೆಯಾಗಿತ್ತು. ಆದರೆ, ಈಗ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಅದರ ಬೆನ್ನಲ್ಲೆ ಸರ್ಕಾರ ಬಿಗಿ ಕ್ರಮಕೈಗೊಂಡಿದ್ದು, ಪ್ರವಾಸಿಗರನ್ನು ನಂಬಿದ ಸಾವಿರಾರು ವ್ಯಾಪಾರಿಗಳು ಕಂಗೆಟ್ಟಿದ್ದಾರೆ.  

ಸುಂದರ ಭೂದೃಶ್ಯಗಳ ಗುರೆಜ್ ಕಣಿವೆ ಸೇರಿದಂತೆ ಒಟ್ಟು 48 ತಾಣಗಳು ಪ್ರವಾಸಿಗರಿಗೆ ತಾತ್ಕಾಲಿಕ ಬಂದ್ ಮಾಡಲಾಗಿದೆ. ಪ್ರಶಾಂತ ಕಣಿವೆಗಳು ಮತ್ತು ಸುಂದರವಾದ ಪರ್ವತಗಳಿಗೆ ಹೆಸರುವಾಸಿಯಾದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಬುಡ್ಗಾಮ್‌ನ ದೂಧ್‌ಪತ್ರಿ ಮತ್ತು ಅನಂತ್‌ನಾಗ್‌ನ ವೆರಿನಾಗ್‌ನಂತಹ ಹಲವಾರು ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಹತ್ಯಾಕಾಂಡದ ನಂತರ ಭಯಭೀತರಾದ ಪ್ರವಾಸಿಗರು ಕೇಂದ್ರಾಡಳಿತ ಪ್ರದೇಶದಿಂದ ಪಲಾಯನ ಮಾಡುತ್ತಿದ್ದಾರೆ, ಆದರೆ ಅನೇಕ ಪ್ರಯಾಣಿಕರು ತಮ್ಮ ಮುಂಬರುವ ಪ್ರವಾಸಗಳನ್ನು ರದ್ದುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಕಾಶ್ಮೀರ ಪ್ರವಾಸೋದ್ಯಮದ ಬಗ್ಗೆ ಅನಿಶ್ಚಿತತೆಯ ಕಾರ್ಮೋಡದ ಮಧ್ಯೆ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments