Webdunia - Bharat's app for daily news and videos

Install App

ಗುಜರಾತ್‌: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 14ಸಾವು, ಭಾರೀ ಹಾನಿ

Sampriya
ಮಂಗಳವಾರ, 6 ಮೇ 2025 (15:13 IST)
Photo Credit X
ಅಹಮದಾಬಾದ್ (ಗುಜರಾತ್‌): ರಾಜ್ಯದಲ್ಲಿ ಸುರಿದ ಮಳೆಯಿಂದ ಕನಿಷ್ಠ 14ಜನ ಮೃತಪಟ್ಟಿರುವ ಘಟನೆ ಬಗ್ಗೆ ಮಂಗಳವಾರ ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲ್ಲೂಕುಗಳ ಪೈಕಿ 168 ತಾಲ್ಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ. ಖೇಡಾ, ಗಾಂಧಿನಗರ, ಮೆಹ್ಸಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಹಲವು ಜಿಲ್ಲೆಗಳಲ್ಲಿ ಬೀಸಿದ ಗಾಳಿಯಿಂದಾಗಿ ಹೋರ್ಡಿಂಗ್‌ಗಳು ಮತ್ತು ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಜತೆಗೆ ಕೆಲವು ಮನೆಗಳು ಕುಸಿದು ಬಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್, ಆನಂದ್, ಖೇಡಾ, ದಾಹೋದ್, ಅರಾವಳಿ ಮತ್ತು ವಡೋದರಾ ಜಿಲ್ಲೆಗಳಲ್ಲಿ ಸೋಮವಾರ ಸಿಡಿಲು, ವಿದ್ಯುತ್ ಅವಘಡ, ಮರಗಳು, ಮನೆಗಳು ಮತ್ತು ಹೋರ್ಡಿಂಗ್‌ಗಳು ಕುಸಿದು ಬಿದ್ದ ಪರಿಣಾಮ 13 ಜನ ಸಾವನ್ನಪ್ಪಿದ್ದಾರೆ.

ಭಾನುವಾರ ಅಹಮದಾಬಾದ್‌ನ ವಿರಮ್‌ಗಾಮ್‌ನಲ್ಲಿ ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದಾರೆ ಎಂದು ಎಸ್‌ಇಒಸಿ ತಿಳಿಸಿದೆ.

ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ ) ಮುನ್ಸೂಚನೆ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments