Webdunia - Bharat's app for daily news and videos

Install App

ಗುಜರಾತ್‌ನಲ್ಲಿ ಮತ್ತೆ ಮುಸ್ಲಿಮರನ್ನು ಬೆದರಿಸುವ ತಂತ್ರ: ವೈರಲ್ ಆದ ಕೋಮುವಾದ ವಿಡಿಯೋ

Webdunia
ಭಾನುವಾರ, 19 ನವೆಂಬರ್ 2017 (16:25 IST)
ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗಳು ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಓಲೈಸಿಕೊಳ್ಳುವ ಇಲ್ಲವೇ ಬೆದರಿಸುವ ತಂತ್ರಗಳು ನಡೆಯುತ್ತಿರುವುದು ವಿಷಾದಕರವಾಗಿದೆ.
 
ಇದೀಗ ಮತ ನೀಡದಿದ್ದಲ್ಲಿ ಮುಂದೆ ಕಾದಿದೆ ಅಪಾಯ. 2002ರ ದಂಗೆ ಮರುಕಳಿಸಬಹುದು ಏನ್ನುವ ರೀತಿಯಲ್ಲಿ ಮುಸ್ಲಿಮರನ್ನು ಬೆದರಿಸುವ ವಿಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.  
 
ವಕೀಲರು, ಸಾಮಾಜಿಕ ಕಾರ್ಯಕರ್ತರಾಗಿರುವ ಗೋವಿಂದ ಪರ್ಮಾರ್ ಸಲ್ಲಿಸಿದ ದೂರಿನ ಮೇರೆಗೆ ಸೋಶಿಯಲ್ ಮೀಡಿಯಾದಲ್ಲಿ ಸುತ್ತುತ್ತಿರುವ ಮತ್ತು ಕೋಮುವಾದಿಯಾಗಿರುವ ವೀಡಿಯೊ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ.
 
ಗುಜರಾತ್ ಅಸೆಂಬ್ಲಿ ಚುನಾವಣೆಗಳ ಮುಂಚೆ ಕೋಮು ದ್ವೇಷವನ್ನು ಪ್ರಚೋದಿಸುವ ಇಂತಹ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ, ಗುಜರಾತ್ ಮುಖ್ಯ ಚುನಾವಣಾಧಿಕಾರಿಗೆ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
 
1.15 ನಿಮಿಷದ ವಿಡಿಯೋ ಕ್ಲಿಪ್‌ನಲ್ಲಿ  ಮಹಿಳೆಯೊಬ್ಬಳು ನಿರ್ಜನ ಪ್ರದೇಶದಿಂದ ಅವಸರದಲ್ಲಿ ಓಡಿ ಬರುತ್ತಿರುತ್ತಾಳೆ. ನಿಮ್ಮ ಮತ ನಿಮ್ಮ ಸುರಕ್ಷೆ ಎನ್ನು ಕ್ಯಾಪ್ಶನ್‌ನೊಂದಿಗೆ ವಿಡಿಯೋ ಅಂತ್ಯವಾಗುತ್ತದೆ.
 
ಏತನ್ಮಧ್ಯೆ, ಅಹಮದಾಬಾದ್‌ಲ್ಲಿರುವ ಸೈಬರ್ ಅಪರಾಧ ಸೆಲ್, ಸಾಮಾಜಿಕ ಮಾಧ್ಯಮದ ವೀಡಿಯೊ ವಿರುದ್ಧ ಶುಕ್ರವಾರ ಸಲ್ಲಿಸಿದ ದೂರಿನ ಬಗ್ಗೆ ತನಿಖೆ ನಡೆಸಿದೆ. ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೋ ಕ್ಲಿಪ್ ಮತದಾನಕ್ಕೆ ಒಳಪಟ್ಟ ಗುಜರಾತ್‌ನಲ್ಲಿ "ಮತಗಳನ್ನು ಧ್ರುವೀಕರಿಸಲು" ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡಲು ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments