ಹತ್ರಾಸ್ ಕೇಸ್: ವಿಚಾರಣೆಗೆ ಹಾಜರಾಗಲು ಸಂತ್ರಸ್ತೆ ಕುಟುಂಬಸ್ಥರ ಷರತ್ತುಗಳು ಹೀಗಿವೆ!

Webdunia
ಸೋಮವಾರ, 2 ನವೆಂಬರ್ 2020 (10:37 IST)
ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ಪ್ರಕರಣದ ತನಿಖೆಯನ್ನು ಅಲ್ಲಹಾಬಾದ್ ಹೈಕೋರ್ಟ್ ಇಂದಿನಿಂದ ಆರಂಭಿಸಲಿದೆ. ಆದರೆ ವಿಚಾರಣೆಗೆ ಹಾಜರಾಗಲು ಸಂತ್ರಸ್ತೆ ಕುಟುಂಬ ಕೆಲವು ಷರತ್ತು ವಿಧಿಸಿದೆ.


ಇಂದಿನ ವಿಚಾರಣೆಗೆ ಸಂತ್ರಸ್ತೆ ಕುಟುಂಬಸ್ಥರು ಹಾಜರಾಗುತ್ತಿಲ್ಲ. ಬದಲಾಗಿ ಅವರ ಪರ ವಕೀಲೆ ಸೀಮಾ ಖುಶ್ವಾಹ ಹಾಜರಾಗಲಿದ್ದಾರೆ. ಆದರೆ ವಿಚಾರಣೆಗೆ ಹಾಜರಾಗಬೇಕಾದರೆ ನಮಗೆ ದೆಹಲಿಯಲ್ಲಿ ಸಂತ್ರಸ್ತೆ ಕುಟುಂಬಸ್ಥರಿಗೆ ವಾಸಸ್ಥಳದ ವ್ಯವಸ್ಥೆ ಮಾಡಿಕೊಡಬೇಕು. ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂಬ ಸಿಎಂ ಯೋಗಿ ಭರವಸೆ ಈಡೇರಿಸಬೇಕು. ಮೂರನೆಯದಾಗಿ ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಮೂರು ಬೇಡಿಕೆಗಳನ್ನು ಕೋರ್ಟ್ ಮುಂದಿಟ್ಟಿದೆ. ಈಗಾಗಲೇ ಈ ಪೈಕಿ ಎಸ್ ಪಿ ವಿಕ್ರಾಂತ್ ವೀರ್ ಅಮಾನಾತಾಗಿದ್ದು, ಅವರು ಇಂದಿನ ವಿಚಾರಣೆಗೆ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ