Webdunia - Bharat's app for daily news and videos

Install App

ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ : ಮೋದಿ ಕರೆ

Webdunia
ಶುಕ್ರವಾರ, 22 ಜುಲೈ 2022 (12:26 IST)
ನವದೆಹಲಿ : ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ.

ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ.

ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments