Webdunia - Bharat's app for daily news and videos

Install App

ಪ್ರಿಯಕರನಿಂದಲೇ ಹತ್ಯೆಯಾದ 17 ವರ್ಷದ ವಿದ್ಯಾರ್ಥಿನಿ

Webdunia
ಬುಧವಾರ, 13 ಸೆಪ್ಟಂಬರ್ 2017 (15:18 IST)
ನಗರದ ಹೊರವಲಯದಲ್ಲಿ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು ಆಕೆಯ ಪ್ರಿಯಕರನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಗುರುತಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಪೊಲೀಸರು ಮದೀನಾಗುಡದ ಅಮೀನ್‌ಪುರ್ ಬೆಟ್ಟದಲ್ಲಿ ವಿದ್ಯಾರ್ಥಿನಿ ಚಾಂದನಿ ಜೈನ್‌ ಕೊಳೆತ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ. ಮಾರನೇ ದಿನವೇ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 
ಮಿಯಾಪುರ್ ಪ್ರದೇಶದ 17 ವರ್ಷದ ಬಾಲಕಿಯೊಬ್ಬಳು ಎರಡು ದಿನಗಳಿಂದ ಕಾಣೆಯಾಗಿದ್ದಳು. ಪೊಲೀಸರು ವಿದ್ಯಾರ್ಥಿನಿ ಕಾಣೆಯಾಗಿರುವುದಕ್ಕಾಗಿ ಅಪಹರಣ ಕೇಸ್ ದಾಖಲಿಸಿದ್ದರು.
 
ಪೊಲೀಸರು ಘಟನಾ ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಬಾಲಕಿ, ಹದಿಹರೆಯದ ಯುವಕನೊಂದಿಗೆ ಅಟೋರಿಕ್ಷಾದಿಂದ ಇಳಿದು ಪೊದೆಗಳತ್ತ ಸಾಗುತ್ತಿರುವುದು ಪತ್ತೆಯಾದ ನಂತರ ಪ್ರಕರಣ ಬಯಲಿಗೆ ಬಂದಿತ್ತು.  
 
ಯುವಕ ಸಾಯಿ ಕಿರಣ್, 6ನೇ ತರಗತಿಯಿಂದ 10ನೇ ತರಗತಿಯವರೆಗೆ ಹತ್ಯೆಯಾದ ವಿದ್ಯಾರ್ಥಿನಿಯ ಸಹಪಾಠಿಯಾಗಿದ್ದ. ಅಚ್ಚರಿಯ ವಿಷಯವೆಂದರೆ, ಹತ್ಯೆಯಾದ ಚಾಂದನಿ ಜೈನ್ ಪೋಷಕರನ್ನು ಸಂತೈಸಲು ಕೂಡಾ ಸಾಯಿ ಕಿರಣ್ ಅವರ ಮನೆಗೆ ತೆರಳಿದ್ದ ಎನ್ನಲಾಗಿದೆ.
 
ಕಳೆದ ಎರಡು ವರ್ಷಗಳಿಂದ ತಾವು ಪರಸ್ಪರ ಪ್ರೀತಿಸುತ್ತಿದ್ದೇವು. ಕೆಲ ತಿಂಗಳುಗಳಿಂದ ಅವಳಿಂದ ದೂರವಾಗಲು ಬಯಸಿದ್ದೆ. ಆದರೆ, ಆಕೆ, ಸಂಬಂಧ ಮುಂದುವರಿಸಿ ವಿವಾಹವಾಗುವಂತೆ ಒತ್ತಡ ಹೇರುತ್ತಿದ್ದಳು. ಆಕೆಯಿಂದ ದೂರವಾಗಲು ಆಕೆಯನ್ನು ಹತ್ಯೆ ಮಾಡಿದ್ದೇನೆ ಎಂದು ಆರೋಪಿ ಯುವಕ ಪೊಲೀಸರಿಗೆ ತಿಳಿಸಿದ್ದಾನೆ.
 
ಬಾಲಕಿಯನ್ನು ಅಮೀನಪುರ್ ಬೆಟ್ಟಕ್ಕೆ ಕರೆದುಕೊಂಡು ಹೋಗಿ, ವಾಗ್ವಾದ ವಿಕೋಪಕ್ಕೆ ತೆರಳಿದ ನಂತರ ಬೆಟ್ಟದಿಂದ ಕೆಳಗೆ ತಳ್ಳಿರುವುದಾಗಿ ಆರೋಪಿ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments