Select Your Language

Notifications

webdunia
webdunia
webdunia
webdunia

ರಾಜ್ಯದ ಜನ ಆತ್ಮಹತ್ಯೆ ಮಾಡಿಕೊಳ್ತಿದ್ರೆ, ಕಾಂಗ್ರೆಸ್ ಸಂಭ್ರಮಿಸುತ್ತಿದೆ : ಸಿ.ಟಿ ರವಿ

ರಾಜ್ಯದ ಜನ ಆತ್ಮಹತ್ಯೆ ಮಾಡಿಕೊಳ್ತಿದ್ರೆ, ಕಾಂಗ್ರೆಸ್ ಸಂಭ್ರಮಿಸುತ್ತಿದೆ : ಸಿ.ಟಿ ರವಿ
ನವದೆಹಲಿ , ಶುಕ್ರವಾರ, 1 ಸೆಪ್ಟಂಬರ್ 2023 (09:55 IST)
ನವದೆಹಲಿ : ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷ ಸಂಭ್ರಮಾಚರಣೆ ಮಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
 
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿರುವ ಕಾಂಗ್ರೆಸ್ ಸರ್ಕಾರ ಸಂಭ್ರಮಾಚರಣೆ ಮಾಡಿದೆ. ಆದ್ರೆ ರಾಜ್ಯದ ಜನ ಸಂಭ್ರಮಿಸುವ ಸ್ಥಿತಿಯಲ್ಲಿ ಇಲ್ಲ. ರಾಜ್ಯದಲ್ಲಿ 70% ಮಳೆ ಕಡಿಮೆಯಾಗಿದೆ. ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಸಂಭ್ರಮ ಮಾಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತ ಕಾಪಾಡುವ ಕ್ರಮ ತೆಗೆದುಕೊಳ್ಳಬಹುದಿತ್ತು. ಕೇಳೋಕು ಮುಂಚೆ ತಮಿಳುನಾಡಿಗೆ ನೀರು ಬಿಟ್ಟರು. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಹಿತಕ್ಕಿಂತ ಐಎನ್ಡಿಐಎ ಒಕ್ಕೂಟ ಮುಖ್ಯವಾಗಿದೆ. ಅದಕ್ಕೋಸ್ಕರ ಕೇಳೋದಕ್ಕೂ ಮುಂಚೆಯೇ ನೀರು ಕೊಟ್ಟಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪರನ್ನ ಕಡೆಗಣಿಸಿದ್ದೇ ಬಿಜೆಪಿಗೆ ಶಾಪ : ರೇಣುಕಾಚಾರ್ಯ