Webdunia - Bharat's app for daily news and videos

Install App

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 38 ಸಾವಿರದ 948 ಸಕ್ರಿಯ ಕೇಸು, 219 ಮಂದಿ ಸಾವು

Webdunia
ಸೋಮವಾರ, 6 ಸೆಪ್ಟಂಬರ್ 2021 (10:32 IST)
ನವದೆಹಲಿ : ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊನ್ನೆಗಿಂತ ಸ್ವಲ್ಪ ಕಡಿಮೆಯಾಗಿದೆ. ಕಳೆದ 1 ದಿನದಲ್ಲಿ ದೇಶದಲ್ಲಿ 38 ಸಾವಿರದ 948 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 219 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೃಢಪಡಿಸಿದೆ.

ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 30 ಲಕ್ಷದ 27 ಸಾವಿರದ 621ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 40 ಸಾವಿರದ 752ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷದ 04 ಸಾವಿರದ 874ರಲ್ಲಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ 38,948 ಹೊಸ ಪ್ರಕರಣಗಳು ಮತ್ತು 219 ಸಾವುಗಳಲ್ಲಿ, ಕೇರಳ ರಾಜ್ಯದಲ್ಲಿ 26,701 ಪ್ರಕರಣಗಳು ಮತ್ತು ನಿನ್ನೆ 74 ಸಾವುಗಳನ್ನು ಕಂಡಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 43 ಸಾವಿರದ 903 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 21 ಲಕ್ಷದ 81 ಸಾವಿರದ 995ಕ್ಕೆ ತಲುಪಿದೆ.
ಕಳೆದ 73 ದಿನಗಳಲ್ಲಿ ವಾರದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇಕಡಾ 2.58ರಷ್ಟಿದ್ದು, ದಿನಂಪ್ರತಿಯ ಪಾಸಿಟಿವ್ ದರ ಶೇಕಡಾ 2.76ರಷ್ಟು ಕಳೆದ 7 ದಿನಗಳಲ್ಲಿ ದಾಖಲಾಗಿದೆ. ಇದುವರೆಗೆ ದೇಶದಲ್ಲಿ 53.14 ಕೋಟಿ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು ರಾಷ್ಟ್ರಾದ್ಯಂತ ಲಸಿಕಾ ಅಭಿಯಾನದಲ್ಲಿ 68.75 ಕೋಟಿ ಡೋಸ್ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments