Webdunia - Bharat's app for daily news and videos

Install App

ರಾಮಲೀಲಾ ಮೈದಾನದಲ್ಲಿ ಇಂದು ಇಂಡಿಯಾ ಒಕ್ಕೂಟದ ಸಮಾವೇಶ

Krishnaveni K
ಭಾನುವಾರ, 31 ಮಾರ್ಚ್ 2024 (09:59 IST)
Photo Courtesy: Twitter
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು ಇಂಡಿಯಾ ಒಕ್ಕೂಟದ ಮಹತ್ವದ ಸಮಾವೇಶ ನಡೆಯಲಿದೆ. ಎಲ್ಲಾ ಇಂಡಿಯಾ ಬ್ಲಾಕ್ ನಾಯಕರು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ರಚಿಸಲಾಗಿತ್ತು. ಅದರಂತೆ ವಿಪಕ್ಷಗಳ ಮೈತ್ರಿ ಕೂಟ ಹೊಂದಾಣಿಕೆ ಮಾಡಿಕೊಂಡು ಈ ಲೋಕಸಭೆ ಚುನಾವಣೆ ಎದಿರುಸುತ್ತಿವೆ. ಈ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಕಂಡುಬಂದರೂ ಅಲ್ಲಲ್ಲಿ ತೇಪೆ ಹಾಕುವ ಯತ್ನವೂ ನಡೆದಿದೆ.

ಇಂದು ಲೋಕಸಭೆ ಚುನಾವಣೆಗೆ ಮುನ್ನ ವಿಪಕ್ಷಗಳ ಮೈತ್ರಿ ಕೂಟ ತಮ್ಮ ಒಗ್ಗಟ್ಟು ಪ್ರದರ್ಶಿಸಿ ಜನರಿಗೆ ಸಂದೇಶ ನೀಡಲು ಹೊರಟಿದೆ. ಇತ್ತೀಚೆಗಷ್ಟೇ ಎಎಪಿ ನಾಯಕ, ದೆಹಲಿ ಸಿಎಂ ಕೇಜ್ರಿವಾಲ್ ಬಂಧನವಾಗಿದೆ. ಇನ್ನೊಂದೆಡೆ ಐಟಿ ಇಲಾಖೆ ಕಾಂಗ್ರೆಸ್ ಬ್ಯಾಂಕ್ ಖಾತೆಯನ್ನು ಸೀಝ್ ಮಾಡಿದೆ. ಈ ಎಲ್ಲಾ ವಿಚಾರಗಳನ್ನಿಟ್ಟುಕೊಂಡು ವಿಪಕ್ಷ ನಾಯಕರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ.

ಇತ್ತ, ಇಂಡಿಯಾ ಬ್ಲಾಕ್ ಸಮಾವೇಶದ ಬಗ್ಗೆ ಬಿಜೆಪಿ ಟಾಂಗ್ ಕೊಟ್ಟಿದೆ. ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ನಾಯಕರೂ ಒಂದಾಗುತ್ತಿದ್ದಾರೆ. ಇದೊಂದು ರೀತಿಯಲ್ಲಿ ಭ್ರಷ್ಟಾಷಾರ ಬಚಾವೊ ಆಂದೋಲನ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments