Webdunia - Bharat's app for daily news and videos

Install App

ಗ್ರಾಮೀಣ ಆರ್ಥಿಕತೆ ಅಭಿವೃದ್ಧಿಗೆ ಸಮಗ್ರ ಕ್ರಮ ಅಗತ್ಯ: ವೆಂಕಯ್ಯ ನಾಯ್ಡು

Webdunia
ಸೋಮವಾರ, 20 ಸೆಪ್ಟಂಬರ್ 2021 (09:27 IST)
ನವದೆಹಲಿ : ದೇಶದ ರೈತರಿಗೆ ಆದಾಯ ಭದ್ರತೆ ಖಾತ್ರಿಪಡಿಸಿಕೊಳ್ಳಲು ಗ್ರಾಮೀಣ ಆರ್ಥಿಕತೆಯ ಕಡೆಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದರು.

ಗುರುಗ್ರಾಮದಲ್ಲಿ ಹರಿಯಾಣ ಅಕಾಡೆಮಿ ಆಫ್ ಹಿಸ್ಟರಿ ಅಂಡ್ ಕಲ್ಚರ್ ಹೊರತಂದಿರುವ 'ಸರ್ ಛೋಟು ರಾಮ್: ಬರಹಗಳು ಮತ್ತು ಭಾಷಣಗಳು' ಐದು ಸಂಪುಟಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿಯೂ ರೈತರು ತಡೆರಹಿತವಾಗಿ ತಮ್ಮ ಕಾರ್ಯ ಮುಂದುವರಿಸಿದ್ದರು ಎಂದು ಶ್ಲಾಘಿಸಿದರಲ್ಲದೆ ಉದ್ದೇಶ ಗ್ರಾಮೀಣ ಆರ್ಥಿಕತೆಯ ಒಟ್ಟಾರೆ ಸುಧಾರಣೆ ಮತ್ತು ಗ್ರಾಮೀಣ ಸಮಾಜದ ಸ್ವಾಸ್ಥ್ಯವಾಗಿರಬೇಕು ಎಂದು ಒತ್ತಿ ಹೇಳಿದರು.
ಕೃಷಿಯನ್ನು ಆಧುನೀಕರಿಸುವ ಮತ್ತು ಅದನ್ನು ಹೆಚ್ಚು ಸಮರ್ಥನೀಯವಾಗಿಸಲು ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದ ಭಾಗವಾಗಿ ನಾವು ನಿಯಮಿತವಾಗಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಯ ತಂತ್ರಗಳನ್ನು ಮರುಪರಿಶೀಲಿಸಬೇಕು ಮತ್ತು ನವೀಕರಿಸಬೇಕು ಎಂದು ಸಲಹೆ ನೀಡಿದರು.
ಕೃಷಿ ದೇಶದ ಮೂಲ ಸಂಸ್ಕೃತಿ ಎಂದ ಅವರು, ಹಳ್ಳಿಗಳು ಆಹಾರ ಧಾನ್ಯಗಳನ್ನು ಉತ್ಪಾದಿಸುವುದಲ್ಲದೆ ಸಂಸ್ಕಾರ, ಮೌಲ್ಯಗಳು ಮತ್ತು ಸಂಪ್ರದಾಯಗಳನ್ನು ಕೂಡ ಜನರಲ್ಲಿ ಬೆಳೆಸುತ್ತವ. ಕೃಷಿ ಭಾರತದ ಆರ್ಥಿಕತೆಯ ಬೆನ್ನೆಲುಬು. ಹಳ್ಳಿಗಳು ಅಭಿವೃದ್ಧಿಯಾಗದೇ ಹಿಂದುಳಿದಿದ್ದರೆ ದೇಶವು ಪ್ರಗತಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments