Webdunia - Bharat's app for daily news and videos

Install App

ಜಲ್ಲಿಕಟ್ಟು ಬಿಕ್ಕಟ್ಟು: ಉಗ್ರ ಲಾಡೆನ್ ಭಿತ್ತಿಪತ್ರ, ಪ್ರತ್ಯೇಕ ರಾಷ್ಟ್ರದ ಕೂಗು

Webdunia
ಶನಿವಾರ, 28 ಜನವರಿ 2017 (08:10 IST)
ಜಲ್ಲಿಕಟ್ಟು ಆಚರಣೆಗೆ ಶಾಶ್ವತ ಕಾನೂನು ಜಾರಿಗೆ ಒತ್ತಾಯಿಸಿ ನಡೆದ ರಾಜ್ಯವ್ಯಾಪಿ ಪ್ರತಿಭಟನೆಯಲ್ಲಿ ಅಂತರಾಷ್ಟ್ರೀಯ ಉಗ್ರ ಒಸಾಮಾ ಬಿನ್ ಲಾಡೆನ್ ಭಿತ್ತಿಪತ್ರ ಪ್ರದರ್ಶನವಾಗಿದೆ. ಜತೆಗೆ ಕೆಲವರು ಪ್ರತ್ಯೇಕ ತಮಿಳು ರಾಷ್ಟ್ರಕ್ಕೂ ಒತ್ತಾಯಿಸಿದ್ದಾರೆ. ಸ್ವತಃ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಈ ಆತಂಕಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೇಲೆ ಮಾತನಾಡುತ್ತಿದ್ದ ಸೆಲ್ವಂ, ಶಾಂತಿಯುತವಾಗಿ ನಡೆಯುತ್ತಿದ್ದ ಜಲ್ಲಿಕಟ್ಟು ಹೋರಾಟ ಹಿಂಸೆಗೆ ತಿರುಗಲು ರಾಷ್ಟ್ರ ಮತ್ತು ಸಮಾಜ ವಿರೋಧಿ ಚಟುವಟಿಕೆಗಳು ಕಾರಣ. ವಿದ್ಯಾರ್ಥಿ ಸಮೂಹದ ನಡುವೆ ನುಸುಳಿದ್ದ ದುಷ್ಟಶಕ್ತಿಗಳು ಧರಣಿಯನ್ನು ಹಿಂಸಾತ್ಮಕವಾಗಿ ಬದಲಾಯಿಸಲು ಕಾರಣರಾಗಿದ್ದಾರೆ ಎಂದು ಸೆಲ್ವಂ ಹೇಳಿದ್ದಾರೆ.
 
ಜಲ್ಲಿಕಟ್ಟು ಆಚರಣೆ ನಿಷೇಧ ತೆರವಿಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸಿ ಸಫಲವಾಗಿದೆ. ಪೊಲೀಸರು ಎಲ್ಲಿಯೂ ಬಲಪ್ರಯೋಗ ನಡೆಸಿಲ್ಲ. ಕೆಲ ಸಮಾಜಘಾತುಕ ಶಕ್ತಿಗಳು ಸನ್ನಿವೇಶದ ದುರ್ಲಾಭ ಪಡೆದುಕೊಂಡಿವೆ. ಪ್ರತಿಭಟನಾಕಾರರು ಒಸಾಮಾ ಬಿನ್ ಲಾಡೆನ್ ಭಿತ್ತಿಪತ್ರ ಪ್ರದರ್ಶಿಸಿರುವುದು ಮತ್ತು ಪ್ರತ್ಯೇಕ ರಾಷ್ಟ್ರಕ್ಕೆ ಒತ್ತಾಯಿಸಿ ಪೋಸ್ಟರ್ ಹಿಡಿದಿರುವ ದಾಖಲೆಗಳು ನಮ್ಮಲ್ಲಿವೆ. ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸೆಲ್ವಂ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments