Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾವಣೆಯಾಗಿದೆ. ಈ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಲಾಗಿದೆ.
ಕೆಸಿಆರ್ ಪಕ್ಷದ ಹೊಸ ಹೆಸರಿಗೆ ಕೇಂದ್ರ ಚುನಾವಣಾ ಆಯೋಗ ಒಪ್ಪಿಗೆ ಸೂಚಿಸಿದೆ. ಟಿಆರ್ಎಸ್ ಹೆಸರನ್ನು ಬಿಆರ್ಎಸ್ ಎಂದು ಬದಲಾಯಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ ಔಪಚಾರಿಕವಾಗಿ ಅನುಮೋದನೆ ನೀಡಿದೆ.
ಪಕ್ಷದ ಹೆಸರು ಬದಲಾವಣೆ ಕುರಿತು ಆಯೋಗವು ಶೀಘ್ರದಲ್ಲೇ ಅಗತ್ಯ ಅಧಿಸೂಚನೆ ಹೊರಡಿಸಲಿದೆ. ಪಕ್ಷದ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಪತ್ರ ಬರೆದು ಗುರುವಾರ ಈ ಕುರಿತು ಮಾಹಿತಿ ನೀಡಿದೆ.