Webdunia - Bharat's app for daily news and videos

Install App

ಕೇರಳ ದೇವಾಲಯದಲ್ಲಿ ರೊಚ್ಚಿಗೆದ್ದ ಆನೆ, ಮೂವರನ್ನು ಬಲಿ ತೆಗೆದುಕೊಂಡ ವಿಡಿಯೋ ಇಲ್ಲಿದೆ

Krishnaveni K
ಶುಕ್ರವಾರ, 14 ಫೆಬ್ರವರಿ 2025 (09:15 IST)
Photo Credit: X
ಕೊಯಿಲಾಂಡಿ: ಕೇರಳದ ಕೊಯಿಲಾಂಡಿ ಬಳಿಯ ಮನಕಲಂಗರ ದೇವಾಲಯದಲ್ಲಿ ಜಾತ್ರೆ ವೇಳೆ ಆನೆ ರೊಚ್ಚಿಗೆದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಉತ್ಸವದ ನಿಮಿತ್ತ ಆನೆಗಳನ್ನು ತರಲಾಗಿತ್ತು. ಇವುಗಳಿಗೆ ಭಾರೀ ಗಾತ್ರದ ಆಭರಣಗಳನ್ನು ಹಾಕಿ ರೆಡಿ ಮಾಡಲಾಗಿತ್ತು. ಆದರೆ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ಆನೆಗಳು ರೊಚ್ಚಿಗೆದ್ದಿವೆ. ಪಟಾಕಿಯ ಸದ್ದಿಗೆ ರೊಚ್ಚಿಗೆದ್ದು ಓಡಾಡಿವೆ.

ಇದರಿಂದಾಗಿ ಜಾತ್ರೆಗೆಂದು ಸೇರಿದ್ದವರೂ ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಮೂವರು ವೃದ್ಧರು ಆನೆಯ ಕಾಲ್ತುಳಿತಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆನೆಗಳು ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬವೇ ಉರುಳಿ ಬಿದ್ದಿದೆ. ಈ ವೇಳೆ ಕಂಬದ ಅಡಿಯಲ್ಲಿ ಹಲವರು ಸಿಲುಕಿದ್ದಾರೆ.

ಘಟನೆಯಲ್ಲಿ 20 ಜನರಿಗೆ ಗಾಯಗಳಾಗಿವೆ. ಇದೀಗ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದೇವಾಲಯಗಳಲ್ಲಿ ಉತ್ಸವದ ವೇಳೆಗೆ ಆನೆಗಳನ್ನು ಬಳಸಬಹುದೇ ಎಂಬ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments