Webdunia - Bharat's app for daily news and videos

Install App

ಯುವಕರಿಗೆ ಕೇಂದ್ರದ ಬಂಪರ್ ಯೋಜನೆ: ಮಾಸಿಕ 5 ಸಾವಿರ ಇಂಟರ್ನ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು

Krishnaveni K
ಗುರುವಾರ, 25 ಜುಲೈ 2024 (09:35 IST)
ನವದೆಹಲಿ: ಮೊನ್ನೆಯಷ್ಟೇ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯುವಕರಲ್ಲಿ ಕೌಶಲಾಭಿವೃದ್ಧಿ ಹೆಚ್ಚಿಸಲು ಇಂಟರ್ನ್ ಶಿಪ್ ಯೋಜನೆಯೊಂದನ್ನು ಪ್ರಕಟಿಸಿದ್ದರು. ಇದಕ್ಕೆ ಯಾರು ಅರ್ಹರು ಎಂಬ ವಿವರ ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇದೂ ಒಂದಾಗಿದೆ. ಈ ಯೋಜನೆಯಲ್ಲಿ 21 ರಿಂದ 24 ವರ್ಷದೊಳಗಿನ ಯುವಕರಲ್ಲಿ 5 ವರ್ಷದೊಳಗೆ ಕೌಶಲಾಭಿವೃದ್ಧಿ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ. ಯುವ ಸಮುದಾಯದಲ್ಲಿ ಉದ್ಯೋಗ ಕೌಶಲ್ಯ ಹೆಚ್ಚಿಸಲು ಇಂಟರ್ನ್ ಶಿಪ್ ಯೋಜನೆ ಜಾರಿಗೆ ತರಲಾಗಿದೆ.

ಅದರಂತೆ ಸರ್ಕಾರ 500 ಟಾಪ್ ಕಂಪನಿಗಳನ್ನು ಈ ಯೋಜನೆಯಲ್ಲಿ ಬಳಸಿಕೊಳ್ಳಲಿದೆ. ಇನ್ನೂ ಉದ್ಯೋಗ ಅರಸುತ್ತಿರುವ 21 ರಿಂದ 24 ವರ್ಷದೊಳಗಿನ ಯುವಕ/ಯುವತಿಯರಿಗೆ ಈ ಕಂಪನಿಗಳಲ್ಲಿ ಪ್ರಾಯೋಗಿಕವಾಗಿ ಉದ್ಯೋಗ ತರಬೇತಿ ನೀಡುವುದು ಯೋಜನೆಯ ಭಾಗವಾಗಿದೆ. ಅವರಿಗೆ ಮಾಸಿಕವಾಗಿ 5,000 ರೂ. ಮತ್ತು ವರ್ಷಕ್ಕೆ ಒಟ್ಟು 66,000 ರೂ. ಭತ್ಯೆ ಸಿಗಲಿದೆ. ಕಂಪನಿಗಳೂ ಉದ್ಯೋಗ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗೆ ತರಬೇತಿ ಜೊತೆಗೆ ಹೆಚ್ಚುವರಿಯಾಗಿ 6,000 ರೂ. ನೀಡಬೇಕಾಗುತ್ತದೆ. ಈ ಮೂಲಕ ಕೌಶಲ್ಯ ತರಬೇತಿ ಜೊತೆಗೆ ಪ್ರೋತ್ಸಾಹ ಧನವೂ ಸಿಗಲಿದೆ.

ಯೋಜನೆಗೆ ಯಾರು ಅರ್ಹರು
ಪದವಿ ಮುಗಿಸಿರುವ ಇನ್ನೂ ಉದ್ಯೋಗ ಅರಸುತ್ತಿರುವ 21 ರಿಂದ 24 ವರ್ಷದೊಳಗಿನ ಯುವ ಸಮೂಹ ಇದಕ್ಕೆ ಅರ್ಹರು. ಅವರು ಯಾವುದೇ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಕುಟುಂಬದ ಇತರೆ ಸದಸ್ಯರು ಸರ್ಕಾರೀ ಉದ್ಯೋಗಿಗಳಾಗಿರಬಾರದು. ಅಭ್ಯರ್ಥಿಗಳು ಐಐಟಿ, ಐಐಎಂ, ಸಿಎ, ಸಿಎಂಎ, ಐಐಎಸ್ಇಆರ್ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್ ಮಾಡಿರಬಾರದು. ಒಟ್ಟಾರೆಯಾಗಿ ಆರ್ಥಿಕವಾಗಿ ಹಿಂದುಳಿದ, ಉದ್ಯೋಗ ಗಿಟ್ಟಿಸಿಕೊಳ್ಳಲು ಕಷ್ಟಪಡುವ ವರ್ಗವನ್ನೇ ಗುರಿಯಾಗಿಟ್ಟುಕೊಂಡು ಈ ಯೋಜನೆ ತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments