Webdunia - Bharat's app for daily news and videos

Install App

ಕೋಲ್ಕತ್ತಾ ಟ್ರೈನಿ ವೈದ್ಯೆ ಕೊನೆಯದಾಗಿ ಮಾತನಾಡಿದ್ದು ಇವರ ಬಳಿ: ಯಾವ ಪಶ್ಚಾತ್ತಾಪವೂ ಇಲ್ಲದೇ ಇಂಚಿಂಚೂ ವರದಿ ನೀಡಿದ ಆರೋಪಿ

Krishnaveni K
ಶುಕ್ರವಾರ, 23 ಆಗಸ್ಟ್ 2024 (11:44 IST)
ಕೋಲ್ಕತ್ತಾ: ಆರ್ ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ನಡೆದ ರೇಪ್ ಆಂಡ್ ಮರ್ಡರ್ ಪ್ರಕರಣದ ಬಗ್ಗೆ ಮತ್ತಷ್ಟು ಕುತೂಹಲಕಾರೀ ಅಂಶಗಳು ಈಗ ಬೆಳಕಿಗೆ ಬಂದಿದೆ.

ಆರೋಪಿ ಸಂಜಯ್ ರಾಯ್ ನನ್ನು ಸಿಸಿಟಿವಿ ದೃಶ್ಯಾವಳಿ ಮತ್ತು ಮೃತದೇಹದ ಪಕ್ಕದಲ್ಲಿದ್ದ ಬ್ಲೂ ಟೂತ್ ಸೆಟ್ ಆಧಾರದಲ್ಲಿ ಆತನನ್ನು ಬಂಧಿಸಲಾಗಿತ್ತು. ಇದೀಗ ಆತ ಘಟನೆಯ ಬಗ್ಗೆ ಇಂಚಿಂಚೂ ಬಿಡದೇ ತಪ್ಪೊಪ್ಪಿಕೊಂಡಿದ್ದಾನೆ. ಸಿಬಿಐ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದು  ವಿಚಾರಣೆ ವೇಳೆ ಆತನಿಗೆ ಕನಿಷ್ಠ ಪಶ್ಚಾತ್ತಾಪವೂ ಇಲ್ಲ ಎನ್ನಲಾಗಿದೆ.

ತಾನು ನಡೆಸಿದ ಕೃತ್ಯದ ಬಗ್ಗೆ ಕೊಂಚವೂ ತಡವರಿಸದೇ ಆರೋಪಿ ಘಟನೆ ಬಗ್ಗೆ ಹೇಳಿಕೊಂಡಿದ್ದಾನೆ. ಈತ ಹೇಳುತ್ತಿರುವ ರೀತಿ ನೋಡಿದರೆ ಆತನಿಗೆ ಸ್ವಲ್ಪವೂ ತಾನು ಮಾಡಿದ ಕೃತ್ಯದ ಬಗ್ಗೆ ಪಶ್ಚಾತ್ತಾಪವಿಲ್ಲವೆನಿಸುತ್ತದೆ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಇನ್ನು, ಕೃತ್ಯ ನಡೆಸುವ ಒಂದು ದಿನ ಹಿಂಚೆಯೇ ವೈದ್ಯೆಯನ್ನು ಆತ ಹಿಂಬಾಲಿಸುತ್ತಿದ್ದ ಎಂಬ  ಅಂಶ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯಗಳಲ್ಲಿ ಆತ ವೈದ್ಯೆಯನ್ನು ಹಿಂಬಾಲಿಸುವುದು ಬೆಳಕಿಗೆ ಬಂದಿದೆ. ಸುಸ್ತಾಯಿತೆಂದು ಟ್ರೈನಿ ವೈದ್ಯೆ ಸುಮಾರು 2.30 ರ ಸುಮಾರಿಗೆ ಸೆಮಿನಾರ್ ಗೆ ಹೋಗಿದ್ದಾರೆ. ಆದರೆ ಒಳಗೆ ಹೋಗುವ ಮೊದಲು ಆಕೆ ಜ್ಯೂನಿಯರ್ ಡಾಕ್ಟರ್ ಒಬ್ಬರ ಜೊತೆ ಏನೋ ಮಾತನಾಡಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಅದಾದ ಬಳಿಕ ವೈದ್ಯೆ ಸೆಮಿನಾರ್  ಹಾಲ್ ಒಳಗೆ ರೆಸ್ಟ್ ಮಾಡಲು ಹೋಗಿದ್ದಾರೆ. ವೈದ್ಯೆ ಹೋದ ಕೆಲವು ಹೊತ್ತಿನ ಬಳಿಕ ಆರೋಪಿ ಸಂಜಯ್ ರಾಯ್ ಸೆಮಿನಾರ್ ಹಾಲ್ ಒಳಗೆ ಹೋಗಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ಹೊರಗೆ ಬಂದಿದ್ದಾನೆ. ಬೆಳಗ್ಗಿನ ಹೊತ್ತಿಗೆ ವೈದ್ಯೆಯ ಮೃತದೇಹ ಸೆಮಿನಾರ್ ಹಾಲ್ ನಲ್ಲಿ ಪತ್ತೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments