Webdunia - Bharat's app for daily news and videos

Install App

ಶಕ್ತಿಯೋಜನೆಯ ನಷ್ಟ ತುಂಬಿಸಲು ಬಸ್ ದರ ಏರಿಕೆ

Krishnaveni K
ಭಾನುವಾರ, 14 ಜುಲೈ 2024 (11:27 IST)
ಬೆಂಗಳೂರು: ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ್ದ ಕಾಂಗ್ರೆಸ್ ಗೆ ಈಗ ನಷ್ಟ ತುಂಬಿಸುವುದೇ ದೊಡ್ಡ ತಲೆನೋವಾಗಿದೆ. ಶಕ್ತಿಯೋಜನೆಯಿಂದ ಕೆಎಸ್ ಆರ್ ಟಿಸಿ ನಷ್ಟದಲ್ಲಿದ್ದು ಸದ್ಯದಲ್ಲೇ ಬಸ್ ದರ ಏರಿಕೆ ಮಾಡುವುದಾಗಿ ಕಾಂಗ್ರೆಸ್ ಶಾಸಕರೇ ಸುಳಿವು ನೀಡಿದ್ದಾರೆ.

ಸರ್ಕಾರ ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿತ್ತು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಸ್ ದರ ಏರಿಕೆ ಬಗ್ಗೆ ಸುಳಿವು ನೀಡಿದ್ದರು. ಆದರೆ ಅದಾದ ಬಳಿಕ ದರ ಏರಿಕೆ ಪ್ರಸ್ತಾಪ ತಣ್ಣಗಾಗಿತ್ತು. ಇದೀಗ ಸ್ವತಃ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ದರ ಏರಿಕೆಯ ಸುಳಿವು ನೀಡಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಕೆಎಸ್ ಆರ್ ಟಿಸಿ ನಷ್ಟದಲ್ಲಿದೆ. ಬಸ್ ನ ಬಿಡಿ ಭಾಗಗಳ ದರವೂ ಏರಿಕೆಯಾಗಿದೆ. ಕಳೆದ 10 ವರ್ಷಗಳಿಂದ ಬಸ್ ದರ ಏರಿಕೆ ಮಾಡಿಲ್ಲ. ವಾಯವ್ಯ ಸಾರಿಗೆಗೆ ಸೇರಿದ ಹಳೆ ಕಟ್ಟಡಗಳನ್ನು ನವೀಕರಿಸಿ ಬಾಡಿಗೆಗೆ ನೀಡಲಾಗುತ್ತದೆ. ಇದೀಗ ಬಸ್ ದರ ಏರಿಕೆ ಅನಿವಾರ್ಯ ಎಂದಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ದರ, ತರಕಾರಿ ದರ ಗಗನಕ್ಕೇರಿದೆ. ಹಾಲಿನ ದರವನ್ನೂ ಇತ್ತೀಚೆಗೆ ಏರಿಕೆ ಮಾಡಲಾಗಿತ್ತು. ಇದೀಗ ಬಸ್ ಪ್ರಯಾಣ ದರವನ್ನೂ ಏರಿಕೆ ಮಾಡಿದರೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಈಗಾಗಲೇ ಗ್ಯಾರಂಟಿ ಯೋಜನೆಯಿಂದ ಜನರ ಮೇಲಾಗುತ್ತಿರುವ ಹೊರೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments