Webdunia - Bharat's app for daily news and videos

Install App

Kumbhmela: ಕಳ್ಳತನ ಮಾಡಿ ಕುಂಭಮೇಳಕ್ಕೆ ಹೋಗಿ ಪಾಪ ಕಳೆಯಲು ಪ್ಲ್ಯಾನ್ ಮಾಡಿದ್ದ, ಕಳ್ಳನ ಸಂಚು ಫೇಲ್ ಆಗಿದ್ದು ಹೇಗೆ

Krishnaveni K
ಶುಕ್ರವಾರ, 24 ಜನವರಿ 2025 (09:38 IST)
ದೆಹಲಿ: ಕುಂಭಮೇಳಕ್ಕೆ ಹೋಗಿ ಪಾಪ ಕಳೆದು ಪುಣ್ಯ ಪ್ರಾಪ್ತಿಯಾಗಬೇಕು ಎಂದು ಎಷ್ಟೋ ಜನ ಗಂಗಾ ನದಿ ಸ್ನಾನ ಮಾಡುತ್ತಾರೆ. ಆದರೆ ಇಲ್ಲೊಬ್ಬ ಕುಂಭಮೇಳಕ್ಕೆ ಹೋಗಲೆಂದೇ ಕಳ್ಳತನಕ್ಕಿಳಿದು ಪೊಲೀಸರ ಅತಿಥಿಯಾಗಿದ್ದಾನೆ.

ದೆಹಲಿಯ ಅರವಿಂದ್ ಅಲಿಯಾಸ್ ಭೋಲಾ ಎಂಬಾತನಿಗೆ ಕುಂಭಮೇಳಕ್ಕೆ ಹೋಗಬೇಕೆಂಬ ಮಹದಾಸೆಯಿತ್ತು. ಆದರೆ ಮನೆ ತುಂಬಾ ಜನ, ಬಡತನವೂ ಇದ್ದಿದ್ದರಿಂದ ಪ್ರಯಾಗ್ ರಾಜ್ ಗೆ ಹೋಗಲು ಹಣ ಹೊಂದಿಸುವ ಪರಿಸ್ಥಿತಿಯಿರಲಿಲ್ಲ.

ಹೀಗಾಗಿ ಆತ ಕಂಡುಕೊಂಡಿದ್ದು ಕಳ್ಳತನದ ದಾರಿ. ದೆಹಲಿಯಲ್ಲಿ ಮೂರು ಮನೆಗಳಿಗೆ ಕನ್ನ ಹಾಕಿ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದ ಆತ ಹಣ ಹೊಂದಿಸಲು ಪ್ರಯತ್ನಿಸಿದ್ದ. ಆದರೆ ಅಷ್ಟರಲ್ಲೇ ಆತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಳ್ಳತನ ಮಾಡಿ ಕೊನೆಗೆ ಕುಂಭಮೇಳಕ್ಕೆ ಹೋಗಿ ಪುಣ್ಯಸ್ನಾನ ಮಾಡಲು ಹೊರಟವನು ಈಗ ಕಂಬಿ ಎಣಿಸುವಂತಾಗಿದೆ. ಈತನ ಮೇಲೆ ಈಗಾಗಲೇ 16 ಸಣ್ಣ ಪುಟ್ಟ ಕೇಸ್ ಗಳಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ ಮಾದಕ ವಸ್ತುಗಳ ವ್ಯಸನಿಯಾಗಿದ್ದ ಎಂದೂ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ