Webdunia - Bharat's app for daily news and videos

Install App

ಕುಂಭಮೇಳಕ್ಕೆ ಬನ್ನಿ ಅಂತಾರೆ ಟಿಕೆಟ್ ದರ ಮಾತ್ರ ಸಾಮಾನ್ಯರಿಗೆ ಕೇಳಿದ್ರೇ ಶಾಕ್ ಆಗುವಂತಿದೆ

Krishnaveni K
ಸೋಮವಾರ, 27 ಜನವರಿ 2025 (15:13 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಬೇಕು ಎಂದು ಸರ್ಕಾರವೇ ಆಹ್ವಾನ ನೀಡುತ್ತದೆ. ಆದರೆ ಅಲ್ಲಿಗೆ ಪ್ರಯಾಣ ಮಾಡಬೇಕಾದರೆ ವಿಮಾನ ಟಿಕೆಟ್ ದರ ಕೇಳಿದ್ರೇ ಜನ ಸಾಮಾನ್ಯರು ಶಾಕ್ ಆಗುವಂತಿದೆ.

ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಭಾಗಿಯಾಗಲು ಕರ್ನಾಟಕದಿಂದಲೂ ಅನೇಕರು ಈಗಾಗಲೇ ಹೋಗಿದ್ದಾರೆ ಮತ್ತು ಇನ್ನೂ ಹೋಗುವ ಪ್ಲ್ಯಾನ್ ಮಾಡಿಟ್ಟುಕೊಂಡಿದ್ದಾರೆ. ಕುಂಭಮೇಳದಲ್ಲಿ ಸಾರ್ವಜನಿಕರಿಗೆ ಅಚ್ಚುಕಟ್ಟಾದ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಆದರೆ ಜನ ಸಾಮಾನ್ಯರಿಗೆ ಕುಂಭಮೇಳಕ್ಕೆ ಹೋಗಲು ಎಲ್ಲವೂ ದುಬಾರಿ ಎನಿಸುತ್ತಿದೆ.

ರೈಲು ಮೂಲಕ ತೆರಳುವುದು ಜನ ಸಾಮಾನ್ಯರಿಗೆ ಸುಲಭ. ಆದರೆ ವಿಮಾನ ಟಿಕೆಟ್ ದರ ವಿಪರೀತ ಏರಿಕೆ ಮಾಡಿದ್ದರಿಂದ ಹೆಚ್ಚಿನವರು ರೈಲಿಗೇ ಹೆಚ್ಚು ಅವಲಂಬಿತರಾಗುವಂತೆ ಮಾಡಿದೆ. ಕುಂಭಮೇಳಕ್ಕೆ ತೆರಳಲು ಟಿಕೆಟ್ ದರ ಈಗ ದಾಖಲೆಯ 41 ಸಾವಿರ ರೂ.ಗೆ ಬಂದು ತಲುಪಿದೆ.

ಸಾಮಾನ್ಯವಾಗಿ ಇಲ್ಲಿಗೆ ತೆರಳಲು ವಿಮಾನ ಟಿಕೆಟ್ ದರ 6,000 ರೂ.ನಿಂದ 7000 ರೂ.ವರೆಗೆ ಇರುತ್ತದೆ. ಆದರೆ ಈಗ ಏಳು ಪಟ್ಟು ಏರಿಕೆಯಾಗಿದ್ದು ಬರೋಬ್ಬರಿ 41 ಸಾವಿರ ರೂ.ಗೆ ತಲುಪಿದೆ. ಮೂಲಗಳ ಪ್ರಕಾರ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮುಂದೆ ಕುಂಭಮೇಳದಲ್ಲಿ ಮೌನಿ ಅಮವಾಸ್ಯೆ, ಅಮೃತ ಸ್ನಾನ ಇರುವುದರಿಂದ ಟಿಕೆಟ್ ಗಳೂ ದುಬಾರಿಯಾಗಿದೆ ಎನ್ನಲಾಗುತ್ತಿದೆ.

ಆದರೆ ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕುಂಭಮೇಳಕ್ಕೆ ಬನ್ನಿ ಎಂದು ಆಹ್ವಾನಿಸುವ ಸರ್ಕಾರಗಳು ಟಿಕೆಟ್ ದರವನ್ನು ಸಾಮಾನ್ಯ ಜನರಿಗೆ ಸಾಧ್ಯವಾಗದಷ್ಟು ಏರಿಕೆ ಮಾಡಿರುವುದು ಯಾಕೆ? ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಟಿಕೆಟ್ ದರ ದಾಖಲೆಯ ಏರಿಕೆ ಕಂಡಿರುವ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಕಾರ್ಯದರ್ಶಿಗಳು, ಏರ್ ಲೈನ್ಸ್ ಸಂಸ್ಥೆಗಳೊಂದಿಗೆ ಸಭೆ ಕರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments