Webdunia - Bharat's app for daily news and videos

Install App

ಭೂಕುಸಿತ ಪರಿಹಾರ ಪ್ಯಾಕೇಜ್‌ ಷರತ್ತಿನಿಂದ ಅನ್ಯಾಯವಾಗಿದೆ: ಪ್ರಿಯಾಂಕಾ ಗಾಂಧಿ

Sampriya
ಸೋಮವಾರ, 24 ಫೆಬ್ರವರಿ 2025 (20:39 IST)
Photo Courtesy X
ನವದೆಹಲಿ: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ ಬಿಡುಗಡೆ ಮಾಡಿರುವ ಪರಿಹಾರ ಪ್ಯಾಕೇಜ್‌ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು  ಪತ್ರ ಬರೆದಿದ್ದಾರೆ.

ಜುಲೈ 30, 2024 ರಂದು, ವಯನಾಡ್‌ನ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿ ಮಟ್ಟಂ ಗ್ರಾಮಗಳಲ್ಲಿ ಸರಣಿ ಭೂಕುಸಿತಗಳು ಸಂಭವಿಸಿ ಅಪಾರ ಪ್ರಾಣ ಹಾನಿ, ಆಸ್ತಿ ಹಾನಿ ಸಂಭವಿಸಿತ್ತು. ಈ ದುರಂತವು 250 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿತು, ಇನ್ನೂ 200 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ವಾರ, ಕೇಂದ್ರ ಸರ್ಕಾರವು 50 ವರ್ಷಗಳ ಕಾಲ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಅಡಿಯಲ್ಲಿ ಬಡ್ಡಿರಹಿತ ಸಾಲವಾಗಿ ಕೇರಳಕ್ಕೆ ₹529.50 ಕೋಟಿ ಸಹಾಯವನ್ನು ಮಂಜೂರು ಮಾಡಿದೆ. ಪುನರ್ವಸತಿ ವೆಚ್ಚವನ್ನು ಭರಿಸಲು ಕೇರಳ ಸರ್ಕಾರವು ವಿಶೇಷ ಹಣಕಾಸು ಪ್ಯಾಕೇಜ್ ಅನ್ನು ಕೋರಿದ ತಿಂಗಳ ನಂತರ ಅನುಮೋದನೆ ದೊರೆತಿದೆ, ಆರಂಭದಲ್ಲಿ ₹2,262 ಕೋಟಿ ಎಂದು ಅಂದಾಜಿಸಲಾಗಿದೆ. ಕೇಂದ್ರವು ಈ ಹಿಂದೆ ವಯನಾಡ್ ಭೂಕುಸಿತವನ್ನು "ತೀವ್ರ ಪ್ರಕೃತಿಯ ವಿಪತ್ತು ಎಂದು ವರ್ಗೀಕರಿಸಿತ್ತು.

ಕೇರಳದ ಸಂಸದರ ನಿರಂತರ ಒತ್ತಾಯದ ನಂತರ, ಕೇಂದ್ರ ಸರ್ಕಾರ ಇತ್ತೀಚೆಗೆ ವಿನಾಶದ ಸಂತ್ರಸ್ತರಿಗೆ ₹529.50ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿತು. ಆದರೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವಾಗ ಷರತ್ತುಗಳಿಂದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಸಂಸದರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments