Webdunia - Bharat's app for daily news and videos

Install App

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

Sampriya
ಬುಧವಾರ, 30 ಏಪ್ರಿಲ್ 2025 (10:35 IST)
Photo Courtesy X
ನವದೆಹಲಿ: ಕೇಂದ್ರ ಸರ್ಕಾರದ ಸೂಚನೆಯಂತೆ ಅಟ್ಟಾರಿ-ವಾಘಾ ಗಡಿ ಬಿಂದುವಿನ ಮೂಲಕ ಆರು ದಿನಗಳಲ್ಲಿ 786 ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳ ವಾಸ್ತವ್ಯದ ಮೇಲೆ ನಿರ್ಬಂಧ ಹೇರಲಾಯಿತು.

ಏಪ್ರಿಲ್ 24 ರಿಂದ ಈನತಕ ಒಟ್ಟು 1376 ಮಂದಿ ಪಾಕಿಸ್ತಾನದಿಂದ ಅಟ್ಟಾರಿ-ವಾಘಾ ಗಡಿಯ ಮೂಲಕ ಭಾರತಕ್ಕೆ ಮರಳಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ 27 ರೊಳಗೆ ಭಾರತವನ್ನು ತೊರೆಯಬೇಕು ಎಂದು ಏ.24ರಂದು ಕಟ್ಟಾಜ್ಞೆಯನ್ನು ಕೇಂದ್ರ ಸರ್ಕಾರ ಹೊರಿಸಿದರು. ರಾಜತಾಂತ್ರಿಕ, ಅಧಿಕೃತ ಮತ್ತು ದೀರ್ಘಾವಧಿಯ ವೀಸಾಗಳನ್ನು ಹೊಂದಿರುವವರನ್ನು ಭಾರತ ಬಿಟ್ಟು ತೊಲಗಿ ಎಂದು ಸೂಚಿಸಲಾಗಿತ್ತು.

12 ವಿಭಾಗಗಳಲ್ಲಿ ಅಲ್ಪಾವಧಿಯ ವೀಸಾಗಳನ್ನು ಹೊಂದಿರುವ ಪಾಕಿಸ್ತಾನಿಗಳ ಗಡುವು ಭಾನುವಾರ ಕೊನೆಗೊಂಡಿದೆ. ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಸರ್ಕಾರ ಬಲವಾಗಿ ಸಲಹೆ ನೀಡಿದೆ. ಪ್ರಸ್ತುತ ಪಾಕಿಸ್ತಾನದಲ್ಲಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ಭಾರತಕ್ಕೆ ಮರಳುವಂತೆ ಸೂಚಿಸಲಾಗಿದೆ.

ಪಾಕಿಸ್ತಾನಕ್ಕೆ ನೇರ ವಿಮಾನವಿಲ್ಲದ ಕಾರಣ ಹಲವರು ದುಬೈ ಅಥವಾ ಇತರ ಮಾರ್ಗಗಳ ಮೂಲಕ ವಿಮಾನದ ಮೂಲಕ ತೆರಳಿದ್ದಾರೆ. ಕೇಂದ್ರ ಗುಪ್ತಚರ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದಲ್ಲಿ ಎಲ್ಲಾ ರಾಜ್ಯಗಳಲ್ಲಿ ದೊಡ್ಡ ಪರಿಶೀಲನೆ ಡ್ರೈವ್ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments