Webdunia - Bharat's app for daily news and videos

Install App

ಮದ್ಯ ಹಗರಣ: ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಣೆ

Sampriya
ಗುರುವಾರ, 21 ಮಾರ್ಚ್ 2024 (17:50 IST)
Photo Courtesy X
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮ ಕೊಳ್ಳುವುದರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ರಕ್ಷಣೆ ನೀಡಲು ನಿರಾಕರಿಸಿದೆ.

ಗುರುವಾರ  ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ತೋರುವುದಿಲ್ಲ ಎಂದಿದ್ದಾರೆ.

ನ್ಯಾಯಾಲಯವು ಈ ಹೊಸ ಮಧ್ಯಂತರ ಮನವಿಯ ಕುರಿತು ಇಡಿಯಿಂದ ಪ್ರತಿಕ್ರಿಯೆಯನ್ನು ಕೋರಿದ್ದು, ಏಪ್ರಿಲ್ 22 ಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ತಮ್ಮ ಅರ್ಜಿಯಲ್ಲಿ ಬಂಧನದ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸುರೇಶ್ ಕುಮಾರ್ ಕಯಾತ್ ಅವರ ಪೀಠವು ಇಂದು ಈ ಪ್ರಕರಣದ ವಿಚಾರಣೆ ನಡೆಸಿದರು.

ಈ ಹಂತದಲ್ಲಿ ಕೇಜ್ರಿವಾಲ್‌ಗೆ ಪರಿಹಾರ ನೀಡಲು ನ್ಯಾಯಾಲಯ ಒಲವು ಹೊಂದಿಲ್ಲ ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ನೇತೃತ್ವದ ಪೀಠ ಹೇಳಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂಬ ತತ್ವದ ಮೇಲೆ ಇಡೀ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್ ಈಗ ಭ್ರಷ್ಟಾಚಾರ ಹಗರಣದ ತನಿಖೆಯಿಂದ ಓಡಿಹೋಗುತ್ತಿರುವುದು ಎಂತಹ ವಿಪರ್ಯಾಸ, ಅವರು ದೆಹಲಿಯ ಸಿಎಂ ಮತ್ತು ಅವರ ನೇತೃತ್ವದಲ್ಲಿ ಅವರ ಮಂತ್ರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. .ಮದ್ಯ ಹಗರಣದ ತನಿಖೆಗಾಗಿ ಅವರ ಇಬ್ಬರು ಮಂತ್ರಿಗಳು ಜಾಮೀನು ಇಲ್ಲದೆ ಜೈಲಿನಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments