Webdunia - Bharat's app for daily news and videos

Install App

ಎಲ್ ಕೆ ಅಡ್ವಾಣಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

Krishnaveni K
ಗುರುವಾರ, 27 ಜೂನ್ 2024 (09:52 IST)
ನವದೆಹಲಿ: ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಎಲ್ ಕೆ ಅಡ್ವಾಣಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯಕ್ಕೆ ಅವರನ್ನು ನಿಗಾದಲ್ಲಿರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಅಟಲ್ ಬಿಹಾರಿ ವಾಜಪೇಯಿ ಬಲಗೈ ಬಂಟನಂತಿದ್ದ ಎಲ್ ಕೆ ಅಡ್ವಾಣಿ ಬಿಜೆಪಿಯ ಭೀಷ್ಮ ಎಂದೇ ಪರಿಚಿತರು. ಇತ್ತೀಚೆಗಷ್ಟೇ ಅವರ ರಾಜಕೀಯ ಜೀವನದ ಸಾಧನೆ ಗುರುತಿಸಿ ಮೋದಿ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿತ್ತು. ಇದೀಗ ಅವರ ಅನಾರೋಗ್ಯದ ಸಂಗತಿ ಆತಂಕಕ್ಕೆ ಕಾರಣವಾಗಿದೆ.

96 ವರ್ಷದ ಎಲ್ ಕೆ ಅಡ್ವಾಣಿಯವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸಮಸ್ಯೆ ಬಗ್ಗೆ ನಿಖರ ಮಾಹಿತಿ ಇಲ್ಲವಾದರೂ ವಯೋಸಹಜವಾದ ಖಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಯೂರೋಲಜಿ ವಿಭಾಗದ ತಜ್ಞ ವೈದ್ಯರು ಎಲ್ ಕೆ ಅಡ್ವಾಣಿಯವರನ್ನು ವಿಶೇಷವಾಗಿ ನೋಡಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಬೇಗನೇ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments