Webdunia - Bharat's app for daily news and videos

Install App

ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಹೊರಗೆ ಕೈಕಟ್ಟಿ ನಿಂತಿದ್ದ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ವೈರಲ್

Krishnaveni K
ಗುರುವಾರ, 24 ಅಕ್ಟೋಬರ್ 2024 (10:32 IST)
Photo Credit: X
ವಯನಾಡು: ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಮಾಡಿದ ಆರೋಪ ಎದುರಾಗಿದೆ. ಅವರನ್ನು ಹೊರಗೆ ನಿಲ್ಲಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಮಲ್ಲಿಕಾರ್ಜುನ ಖರ್ಗೆ ಕೂಡಾ ನಿನ್ನೆ ಪ್ರಿಯಾಂಕ ನಾಮಪತ್ರ ಸಲ್ಲಿಕೆ ವೇಳೆ ವಯನಾಡಿಗೆ ಬಂದಿದ್ದರು. ಈ ವೇಳೆ ಚುನಾವಣಾಧಿಕಾರಿಗಳ ಕಚೇರಿ ಒಳಗೆ ಖರ್ಗೆಯವರನ್ನು ಒಳಗೆ ಬಿಟ್ಟುಕೊಂಡಿಲ್ಲ. ಹೊರಗೆ ಬಾಗಿಲ ಬಳಿಯೇ ನಿಲ್ಲಿಸಲಾಗಿತ್ತು ಎಂಬ ವಿಡಿಯೋವೊಂದು ವೈರಲ್ ಆಗಿದ್ದು, ಇದು ಕಾಂಗ್ರೆಸ್ ನಲ್ಲಿ ದಲಿತ ನಾಯಕನ ಸ್ಥಿತಿ ಎಂದು ಬಿಜೆಪಿ ಟೀಕಿಸಿದೆ.

ಆದರೆ ಖರ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ಫೋಟೋದಲ್ಲಿ ಅವರೂ ಪ್ರಿಯಾಂಕ ಜೊತೆಗೆ ಕುಳಿತಿದ್ದರು. ಆದರೆ ಇದು ಒಮ್ಮೆ ಮಾತ್ರ ಎಂದು ಹೇಳಲಾಗಿದೆ. ಬಳಿಕ ಚುನಾವಣಾಧಿಕಾರಿಗಳು 5 ಜನಕ್ಕಿಂತ ಹೆಚ್ಚು ಮಂದಿ ಕೊಠಡಿಯೊಳಗಿರಬಾರದು ಎಂದಿದ್ದಕ್ಕೆ ಖರ್ಗೆ ಹೊರಗೆ ನಿಂತರು ಎನ್ನಲಾಗುತ್ತಿದೆ.

ಆದರೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಕುಹುಕಗಳು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಲ್ಲಿ ಎಷ್ಟೇ ಹಿರಿಯ ವ್ಯಕ್ತಿಯಾಗಿರಲಿ, ಗಾಂಧಿ ಕುಟುಂಬದ ಮುಂದೆ ಕೈ ಕಟ್ಟಿಕೊಂಡು ನಿಲ್ಲಬೇಕು. ಅದರಲ್ಲೂ ಖರ್ಗೆಯಂತಹ ಹಿರಿಯ, ದಲಿತ ನಾಯಕನಿಗೆ ಮಾಡಿದ ಅವಮಾನವಿದು ಎಂದು ಲೇವಡಿ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments