Webdunia - Bharat's app for daily news and videos

Install App

ದೂರದರ್ಶನ ಲೋಗೋ ಕೇಸರಿ ಬಣ್ಣ: ಮಮತಾ ಬ್ಯಾನರ್ಜಿ ಆಕ್ರೋಶ

Krishnaveni K
ಭಾನುವಾರ, 21 ಏಪ್ರಿಲ್ 2024 (09:02 IST)
Photo Courtesy: Twitter
ನವದೆಹಲಿ: ದೂರದರ್ಶನ ಸುದ್ದಿ ವಾಹಿನಿ ಲೋಗೋ ಬಣ್ಣ ಕೇಸರಿಯಾಗಿ ಬದಲಾಗಿದ್ದು, ಇದರ ವಿರುದ್ಧ ಈಗ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಬೆನ್ನಲ್ಲೇ ದೂರದರ್ಶನ ಲೋಗೋ ಬಣ್ಣ ಬದಲಾಯಿಸಿದ್ದು ಸರಿಯಲ್ಲ ಎಂಬುದು ಮಮತಾ ವಾದ. ಕೇಸರಿ ಬಿಜೆಪಿಯ ಸಾಂಕೇತಿಕ ಬಣ್ಣ. ಇದೀಗ ದೇಶದಾದ್ಯಂತ ಜನ ನೋಡುವ ಸರ್ಕಾರೀ ಸುದ್ದಿ ವಾಹಿನಿಯ ಲೋಗೋಗೆ ಕೇಸರಿ ಬಣ್ಣ ಹಾಕಿದ್ದು ಪರೋಕ್ಷವಾಗಿ ಬಿಜೆಪಿ ಮತ್ತು ಸಂಘ ಪರಿವಾರವನ್ನು ಪ್ರಚಾರ ಮಾಡಿದಂತಾಗುತ್ತದೆ ಎಂಬುದು ಮಮತಾ ಆರೋಪ.

‘ದೂರದರ್ಶನ ಲೋಗೋ ಬಣ್ಣ ಕೇಸರಿಯಾಗಿದ್ದು ನನಗೆ ಶಾಕ್ ಆಗಿದೆ. ಇದು ಕಾನೂನು ಬಾಹಿರವಾಗಿ ಮಾಡಲಾಗಿದೆ. ಅದೂ ದೇಶದಲ್ಲಿ ಚುನಾವಣೆ ಜಾರಿಯಲ್ಲಿರುವಾಗ ಇಂತಹ ಬದಲಾವಣೆ ಮಾಡಿರುವುದು ತಪ್ಪು. ಕೇಸರೀಕರಣ ಮಾಡಿರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಚುನಾವಣಾ ಆಯೋಗ ತಕ್ಷಣವೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ಮಮತಾ ಆಗ್ರಹಿಸಿದ್ದಾರೆ.

ಒಂದೆಡೆ ಮಮತಾ ಈ ರೀತಿ ಆರೋಪಿಸಿದ್ದರೆ ಮತ್ತೊಂದೆಡೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳ್ವಿಯಾ ಇದನ್ನು ಸಮರ್ಥಿಸಿಕೊಂಡಿದ್ದಾರೆ. ದೂರದರ್ಶನ ಲೋಗೋ ಬಣ್ಣವನ್ನು 1982 ರಲ್ಲೇ ಪರೀಕ್ಷಿಸಲಾಗಿತ್ತು. ಅದನ್ನು ಈಗ ಜಾರಿಗೆ ತರಲಾಗಿದೆ ಅಷ್ಟೇ. ಆವತ್ತು ಅದನ್ನು ನೀಲಿ ಬಣ್ಣಕ್ಕೆ ತಿರುಗಿಸಿದ್ದು ಯಾರು ಎಂದು ಪತ್ತೆ ಮಾಡಿ. ಇದರಲ್ಲಿ ಶಾಕ್ ಆಗುವಂತದ್ದು ಏನೂ ಇಲ್ಲ’ ಎಂದು ತಿರುಗೇಟು ನೀಡಿದ್ದಾರೆ. ಆದರೆ ಸರ್ಕಾರೀ ಸ್ವಾಮ್ಯದ ದೂರದರ್ಶನ ಲೋಗೋ ವಿಚಾರ ಈಗ ವಿಪಕ್ಷಗಳ ಟೀಕೆಗೆ ಗುರಿಯಾಗುವ ಎಲ್ಲಾ ಸಾಧ‍್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments