Webdunia - Bharat's app for daily news and videos

Install App

ಮಾತನಾಡುವಾಗ ಮೈಕ್ ಕಟ್ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಆಯೋಗ ಸಭೆಯಿಂದ ಹೊರ ನಡೆದ ಮಮತಾ ಬ್ಯಾನರ್ಜಿ

Krishnaveni K
ಶನಿವಾರ, 27 ಜುಲೈ 2024 (15:24 IST)
ನವದೆಹಲಿ: ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗ ಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಿಂದ ಹೊರನಡೆದಿದ್ದಾರೆ.

ತಾನು ಮಾತನಾಡುವಾಗ ಮೈಕ್ ಕಟ್ ಮಾಡಿದ್ದಾರೆ. ಕೇವಲ ಐದು ನಿಮಿಷ ಮಾತ್ರ ಮಾತನಾಡಲು ಅವಕಾಶ ನೀಡಲಾಗಿದೆ. ಎನ್ ಡಿಎ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮಾತ್ರ ಮಾತನಾಡಲು ಹೆಚ್ಚು ಹೊತ್ತು ಅವಕಾಶ ನೀಡಲಾಗಿದೆ ಎಂದು ಮಮತಾ ಆಕ್ರೋಶ ಹೊರಹಾಕಿದ್ದಾರೆ.

‘ನಾನು ಸಭೆಯನ್ನು ಬಹಿಷ್ಕರಿಸಿದ್ದೇನೆ. ಚಂದ್ರಬಾಬು ನಾಯ್ಡು ಅವರಿಗೆ 20 ನಿಮಿಷ ಮಾತನಾಡಲು ಅವಕಾಶ ನೀಡಲಾಗಿದೆ. ಅಸ್ಸಾಂ, ಗೋವಾ, ಛತ್ತೀಸ್ ಘಡ ಮುಖ್ಯಮಮತ್ರಿಗಳು 10-12 ನಿಮಿಷ ಮಾತನಾಡಿದರು. ಆದರೆ ನನಗೆ ಕೇವಲ ಐದು ನಿಮಿಷ ಮಾತನಾಡಲು ಅವಕಾಶ ಸಿಕ್ಕಿತ್ತು. ಬಳಿಕ ನನ್ನ ಭಾಷಣ ನಿಲ್ಲಿಸಲಾಯಿತು. ಮೈಕ್ ಕಟ್ ಮಾಡಿದ್ದಾರೆ’ ಎಂದು ಮಮತಾ ಆರೋಪಿಸಿದ್ದಾರೆ.

ನೀತಿ ಆಯೋಗದ ಸಭೆಗೆ ಇಂಡಿಯಾ ಒಕ್ಕೂಟದ ಪಕ್ಷಗಳು ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕಿ ಸಭೆಗೇ ಹಾಜರಾಗಲಿಲ್ಲ. ಅದರಲ್ಲಿ ಕರ್ನಾಟಕ ಸಿಎಂ ಕೂಡಾ ಸೇರಿದ್ದಾರೆ. ಆದರೆ ಮಮತಾ ಇಂಡಿಯಾ ಒಕ್ಕೂಟವನ್ನು ಧಿಕ್ಕರಿಸಿ ಸಭೆಗೆ ಹಾಜರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments