Webdunia - Bharat's app for daily news and videos

Install App

ನೃತ್ಯ ಮಾಡಲು ನಿರಾಕರಿಸಿದ್ದಕ್ಕೆ ಕೊಲೆ

Webdunia
ಬುಧವಾರ, 15 ಫೆಬ್ರವರಿ 2017 (15:21 IST)
ಸಮಾಜ ಎಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ ಎಂದರೆ ಕೊಲೆಯಂತಹ ಅಪರಾಧಗಳನ್ನು ಎಸಗಲು ಕಾರಣವೇ ಬೇಕಿಲ್ಲ. ಅದಕ್ಕೊಂದು ಉತ್ತಮ ಉದಾಹರಣೆ ಮುಂಬೈನಲ್ಲಿ ನಡೆದ ಈ ಹೇಯ ಕೃತ್ಯ.

ಜನ್ಮದಿನದ ನಿಮಿತ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನು ಹತ್ಯೆಗೈದ ಅಮಾನುಷ ಘಟನೆ ಮುಂಬೈನಲ್ಲಿ ನಡೆದಿದೆ. 
 
ನಿನ್ನೆ ರಾತ್ರಿ ಈ ಕೃತ್ಯ ನಡೆದಿದ್ದು ಮೃತನನ್ನು ಅಂಕುಶ್ ಜಾಧವ್ ಎಂದು ಗುರುತಿಸಲಾಗಿದೆ.
 
ಮೃತ ಅಂಕುಶ್ ಮತ್ತು ಆತನ ಸ್ನೇಹಿತ ಕೇತನ್ ಶಿರವಾಡ್ಕರ್ ತಮ್ಮ ಕಾಮನ್ ಫ್ರೆಂಡ್ ಹುಟ್ಟುಹಬ್ಬದ ನಿಮಿತ್ತ ಸಬ್ ಅರ್ಬನ್ ಅಂಧೇರಿಯಲ್ಲಿರುವ ಆತನ ಮನೆಗೆ ಹೋಗಿದ್ದರು. ಪಾರ್ಟಿ ನಡೆಯುತ್ತಿದ್ದಾಗ ಕೇತನ್, ಅಂಕುಶ್ ಬಳಿ ನೃತ್ಯ ಮಾಡುವಂತೆ ಹೇಳಿದ್ದಾನೆ. ಆದರಾತ ನಿರಾಕರಿಸಿದ್ದಾನೆ. ಇಬ್ಬರು ಕುಡಿದ ಮತ್ತಿನಲ್ಲಿದ್ದರಿಂದ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಬಳಿಕ ಇಬ್ಬರು ಕೈ ಮಿಲಾಯಿಸಿಕೊಂಡು ಹೊಡೆದಾಡಿದ್ದಾರೆ. 
 
ಪಾರ್ಟಿಯಲ್ಲಿದ್ದ ಇತರರು ಅವರನ್ನು ಬೇರ್ಪಡಿಸಲು ಪ್ರಯತ್ನಿಸಿದರಾದರೂ, ಕುಡಿದ ಮತ್ತಿನಲ್ಲಿದ್ದ ಕೇತನ್ ಅಲ್ಲೇ ಇದ್ದ ಮರದ ಹಲಗೆಯಿಂದ ಅಂಕುಶ್ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಅಂಕುಶ್‌ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. 
 
ಕೊಲೆ ಆರೋಪಿ ವಿರುದ್ಧ ಐಪಿಸಿ ವಿಭಾಗ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments