Webdunia - Bharat's app for daily news and videos

Install App

ಮದುವೆ ಆಗು ಎಂದಿದ್ದಕ್ಕೆ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಿಯಕರ!

Webdunia
ಶುಕ್ರವಾರ, 10 ಡಿಸೆಂಬರ್ 2021 (14:38 IST)
ಲಕ್ನೋ : ಮಹಿಳೆಯೊಬ್ಬಳು ತನ್ನ ಪ್ರಿಯಕರನ್ನು ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಮಹಿಳೆಯೇ ಹತ್ಯೆಯಾದ ಘಟನೆ ಮಿರತ್ನಲ್ಲಿ ನಡೆದಿದೆ.

ಸೈಫ್ಪುರ ಗ್ರಾಮದ ನಿವಾಸಿ ಕಾಂಚನಾ ಶರ್ಮಾ(22) ಕೊಲೆಯಾದ ಯುವತಿ. ಕಾಂಚನಾ ಬಿಎ ವಿದ್ಯಾರ್ಥಿನಿಯಾಗಿದ್ದು, ಹಸ್ತಿನಾಪುರದಲ್ಲಿ ಕಂಪ್ಯೂಟರ್ ಕೋಚಿಂಗ್ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಳು. ಮೂರು ತಿಂಗಳ ಹಿಂದೆ, ಅವಳು ರೋಹಿತ್ನನ್ನು ಭೇಟಿಯಾಗಿದ್ದಳು. ಈ ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತ್ತು.

ಈ ಹಿನ್ನೆಲೆಯಲ್ಲಿ ಕಾಂಚನಾ ತನ್ನನ್ನು ಮದುವೆಯಾಗುವಂತೆ ರೋಹಿತ್ಗೆ ಒತ್ತಡ ಹೇರುತ್ತಿದ್ದಳು. ಬುಧವಾರ ಕಾಂಚನಾ ರೋಹಿತ್ಗೆ ಕರೆ ಮಾಡಿ, ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಈ ವಿಷಯ ಆರೋಪಿಯ ಕೋಪಕ್ಕೆ ಕಾರಣವಾಗಿದೆ. ನಂತರ ಅವರಿಬ್ಬರು ಭೇಟಿಯಾಗಿದ್ದಾರೆ. ಆಗ ರೋಹಿತ್ ಅವಳನ್ನು ಕಾರಿನಲ್ಲಿ ಕಾಡಿಗೆ ಕರೆದೊಯ್ದು ಕಾಂಚನಾಳ ಕತ್ತು ಹಿಸುಕಿದ್ದಾನೆ. ಅಲ್ಲದೆ ತನ್ನ ಸ್ನೇಹಿತರ ಸಹಾಯದಿಂದ ಕಾಂಚನಾಳನ್ನು ನದಿಗೆ ಎಸೆದಿದ್ದಾನೆ.

ಕಾಂಚನಾ ಡಿ. 6ರಂದು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅವಳ ತಂದೆ ಹಸ್ತಿನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಾವಿಷನ್ ಸ್ಟೋರ್ ಮಾಲೀಕ ರೋಹಿತ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. 

ರೋಹಿತ್ ಪ್ರಮುಖ ಆರೋಪಿಯಾಗಿದ್ದು, ರಾಹುಲ್ ಮತ್ತು ಸೌರಭ್ ಕೊಲೆಗೆ ಸಹಾಯ ಮಾಡಿದ್ದಾರೆ. ಮಹಿಳೆಯನ್ನು ಕೊಂದು ಶವವನ್ನು ಗಂಗಾ ನದಿಯಲ್ಲಿ ಎಸೆಯಲು ಸೌರಭ್ಗೆ ಅವನ ಸ್ನೇಹಿತರು ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments