ಜನ್ಮದಿನದಂದೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

Webdunia
ಮಂಗಳವಾರ, 1 ಮಾರ್ಚ್ 2022 (10:47 IST)
ಮನೆ ಬಿಟ್ಟು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.
 
ತಾಲೂಕಿನ ಹುದುಕುಳ ಗ್ರಾಮದ 9ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ತನ್ನ ಜನ್ಮದಿನವಾದ ಶುಕ್ರವಾರ ಹೊಸ ಬಟ್ಟೆ ಹಾಗೂ ಚಾಕ್ಲೇಟ್ಸ್ ಕೊಡಿಸಿಲ್ಲವೆಂದು ಪೋಷಕರ ವಿರುದ್ಧ ಮುನಿಸಿಕೊಂಡು ಶಾಲೆಗೂ ಹೋಗದೆ, ಮನೆಯವರಿಗೂ ತಿಳಿಸದೆ ಬಸ್ ಹತ್ತಿ ಬಂಗಾರಪೇಟೆಗೆ ಬಂದಿದ್ದಳು.

ಬಸ್ ನಿಲ್ದಾಣದಲ್ಲಿ ಒಬ್ಬಳೇ ಕುತಿಳಿದ್ದ ವಿದ್ಯಾರ್ಥಿನಿಯನ್ನು ಗಮನಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ಪುಸಲಾಯಿಸಿ ಪಾರ್ಕ್ಗೆ ಕರೆದುಕೊಂಡು ಹೋಗಿ ಸಂಜೆವರೆಗೂ ಕಾಲ ಕಳೆದಿದ್ದಾರೆ.

ಬಳಿಕ ಪಟ್ಟಣದಿಂದ ಆಂಧ್ರಗಡಿಗೆ ಅಂಟಿಕೊಂಡಿರುವ ತನಿಮಡಗು ಗ್ರಾಮಕ್ಕೆ ಖಾಸಗಿ ಬಸ್ನಲ್ಲಿ ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಗಡಿಯಲ್ಲಿರುವ ಬಾರ್ನಲ್ಲಿ ನಾಲ್ವರು ಆರೋಪಗಳು ಕುಡಿದು ಬಳಿಕ ಸುತ್ತಮುತ್ತಲಿರುವ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ವೇಳೆ ಬಾಲಕಿಯ ಕಿರುಚಾಟ ಕೇಳಿದ ದಾರಿಹೋಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಬಾಲಕಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಮುಂದಿನ ಸುದ್ದಿ
Show comments