Webdunia - Bharat's app for daily news and videos

Install App

ಧ್ವಾರಕ್ಕೆ ಉಗುಳಿದ MLA: ಯುಪಿ ಸರ್ಕಾರದಿಂದ ವಿಧಾನಸಭೆಯಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ

Sampriya
ಬುಧವಾರ, 5 ಮಾರ್ಚ್ 2025 (17:24 IST)
Photo Courtesy X
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಪಾನ್-ಮಸಾಲಾ ಉಗುಳುವ ಘಟನೆಯ ನಂತರ, ಸ್ಪೀಕರ್ ಸತೀಶ್ ಮಹಾನಾ ಬುಧವಾರ ವಿಧಾನಸಭಾ ಆವರಣದಲ್ಲಿ ಪಾನ್-ಮಸಾಲಾ ಮತ್ತು ಗುಟ್ಕಾ ಸೇವನೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ವಿಧಾನಸೌಧದ ಆವರಣದಲ್ಲಿ ಪಾನ್ ಮಸಾಲ ಮತ್ತು ಗುಟ್ಕಾ ಸೇವ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದೆ. ವಿಧಾನಸಭಾ ಆವರಣದಲ್ಲಿ ಯಾರಾದರೂ ಪಾನ್ ಮಸಾಲ ಮತ್ತು ಗುಟ್ಕಾ ಸೇವಿಸಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು ಮತ್ತು ಅವರ ವಿರುದ್ಧ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಾ ತಿಳಿಸಿದ್ದಾರೆ.

ಶಾಸಕರೊಬ್ಬರು ಪಾನ್‌ ಮಾಸಾಲ ತಿಂದು ವಿಧಾನಸಭೆಯ ಧ್ವಾರಕ್ಕೆ ಉಗುಳಿದ್ದರು. ಇದರಿಂದ ಕೋಪಗೊಂಡ ಸ್ಪೀಕರ್‌ ಸತೀಶ್ ಮಹಾನಾ ಅವರು ಸಿಬ್ಬಂದಿಯನ್ನು ಕರೆಸಿ ಸ್ವತಃ ಸ್ವಚ್ಛಗೊಳಿಸಿದ್ದರು. ಇದರಿಂದ ಕೋಪಗೊಂಡ ಸ್ಪೀಕರ್ ಅವರು ಇದೀಗ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ಪೀಕರ್‌ ಅವರು, ವಿಧಾನಸೌಧದ ಧ್ವಾರಕ್ಕೆ ಪಾನ್ ಮಸಾಲ ಸೇವಿಸಿ ಉಗುಳಿರುವ ಬಗ್ಗೆ ಮಾಹಿತಿ ಸಿಕ್ಕಿತು. ಹೀಗಾಗಿ ಇಲ್ಲಿಗೆ ಬಂದು ಸ್ವಚ್ಛ ಮಾಡಿದ್ದೇನೆ. ವಿಡಿಯೋದಲ್ಲಿ ಶಾಸಕರನ್ನು ನೋಡಿದ್ದೇನೆ. ಆದರೆ ಯಾರನ್ನೂ ಅವಹೇಳನ ಮಾಡಲು ನಾನು ಬಯಸುವುದಿಲ್ಲ. ಆದರೆ ನಾನು ಅವರ ಹೆಸರು ಹೇಳುತ್ತಿಲ್ಲ.ಯಾರಾದರೂ ಈ ರೀತಿ ಮಾಡುವುದನ್ನು ಕಂಡರೆ ಅವರನ್ನು ತಡೆಯಬೇಕು ಎಂದು ಎಲ್ಲ ಸದಸ್ಯರಿಗೆ ಮನವಿ ಮಾಡುತ್ತೇನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments