Webdunia - Bharat's app for daily news and videos

Install App

ಮೋದಿಗೆ ತಮ್ಮ ವೈಫಲ್ಯ ಮುಚ್ಚಿಹಾಕಲು ಕಾಂಗ್ರೆಸ್‌ ಇಲ್ಲವೆ ನೆಹರು ಬೇಕು: ದಿನೇಶ್ ಗುಂಡೂರಾವ್‌

Sampriya
ಸೋಮವಾರ, 31 ಮಾರ್ಚ್ 2025 (18:30 IST)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ವೈಫಲ್ಯ ಮುಚ್ಚಿಹಾಕಲು  ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ  ಸಿಕ್ಕಿದೆ ಎಂಬ ಪ್ರಧಾನಿ ಹೇಳಿಕೆಗೆ ಆಕ್ರೋಶ ಹೊರಹಾಕಿ ದಿನೇಶ್ ಗುಂಡೂರಾವ್ ಪೋಸ್ಟ್ ಹಂಚಿಕೊಂಡಿದ್ದಾರೆ.

ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ‌. ಪ್ರಧಾನಿ ನರೇಂದ್ರ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು‌.

ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ‌ ಮಳೆ ಜಾಸ್ತಿ ಬಂದರೂ ನೆಹೆರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.

ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ‌ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೆ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್‌ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೆ ಎಂದು ಪ್ರಶ್ನೆ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments