Webdunia - Bharat's app for daily news and videos

Install App

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮೋದಿ, ಪಿಣರಾಯಿ, ಅದಾನಿ, ತರೂರ್‌: ಏನು ವಿಶೇಷ ಗೊತ್ತಾ

Sampriya
ಶುಕ್ರವಾರ, 2 ಮೇ 2025 (15:58 IST)
Photo Courtesy X
ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸದಾ ಟೀಕಿಸುತ್ತಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಇಂದು ಮೋದಿ ಪಕ್ಕದಲ್ಲೇ ಕೂತು ಮಾತುಕತೆ ನಡೆಸಿದ್ದಾರೆ. ಇವರಿಬ್ಬರಿಗೆ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ತಿರುವನಂತಪುರದ ಕಾಂಗ್ರೆಸ್‌ ಸಂಸದ ಶಶಿ ತರೂರ್ ಸಾಥ್‌ ನೀಡಿದ್ದಾರೆ.

ಇದು ನಡೆದಿರುವುದು ಕೇರಳದ ತಿರುವನಂತಪುರದಲ್ಲಿ ಅದಾನಿ ಸಮೂಹ ಸಂಸ್ಥೆ ಅಭಿವೃದ್ಧಿಪಡಿಸಿರುವ ವಿಳಿಂಜಂ ಬಂದರು ಉದ್ಘಾಟನೆ ಸಮಾರಂಭದಲ್ಲಿ. ಈ ಐತಿಹಾಸಿಕ ಬಂದರಿನ ಮೊದಲ ಹಂತದ ಸೌಲಭ್ಯವನ್ನು ಪ್ರಧಾನಿಯವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಹಸ್ತಾಂತರಿಸಿದ್ದಾರೆ. ವಿಳಿಂಜಂ ಬಂದರಿನ ಎರಡನೇ ಹಂತದ ಯೋಜನೆಗೂ ಮೋದಿ ಚಾಲನೆ ನೀಡಿದ್ದಾರೆ. 

ಅದಾನಿ ಸಮೂಹಕ್ಕೆ ಸೇರಿದ ಅದಾನಿ ಪೋರ್ಟ್ಸ್ (ಎಪಿಎಸ್​​ಇಝಡ್) ಈ ಆಳ ನೀರಿನ ಬಂದರನ್ನು ಅಭಿವೃದ್ಧಿಪಡಿಸಿದೆ. ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ನಡೆದ ಈ ಯೋಜನೆಯ ವೆಚ್ಚ ₹8,000 ಕೋಟಿ ಆಗಿದೆ.

ವಿಳಿಂಜಂ ಅಂತರರಾಷ್ಟ್ರೀಯ ಬಂದರು ಭಾರತದ ಮೊದಲ ಟ್ರಾನ್ಸ್​​ಶಿಪ್​​ಮೆಂಟ್ ಪೋರ್ಟ್ (ಹಡಗಿನಿಂದ ಹಡಗಿಗೆ ಸರಕು ಸಾಕಿಸುವ ಬಂದರು) ಆಗಿರುವುದು ವಿಶೇಷ. ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಹಡಗು ಸಾಗಣೆಯಲ್ಲಿ ಭಾರತಕ್ಕೆ ಒಂದು ಮಹತ್ವದ ಪಾತ್ರ ಸಿಕ್ಕಂತಾಗುತ್ತದೆ. ಈ ಯೋಜನೆಯು ನವಯುಗದ ಅಭಿವೃದ್ಧಿಯ ಸಂಕೇತ ಎಂದು ಮೋದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments