Webdunia - Bharat's app for daily news and videos

Install App

ವಿಪಕ್ಷಗಳು ಒಂದಾದ್ರೆ ಮೋದಿ ಎಲ್ಲಿಯೂ ಕಾಣೋಲ್ಲ: ರಾಹುಲ್ ವಾಗ್ದಾಳಿ

Webdunia
ಶುಕ್ರವಾರ, 18 ಆಗಸ್ಟ್ 2017 (15:22 IST)
ಒಂದು ವೇಳೆ ನಾವೆಲ್ಲರು ಒಂದಾಗಿ ಹೋರಾಟ ಮಾಡಿದಲ್ಲಿ ಬಿಜೆಪಿ ದೇಶದಲ್ಲಿಯೇ ಕಾಣುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಪಕ್ಷಗಳಿಗೆ ಕರೆ ನೀಡಿದ್ದಾರೆ. 
ಬಂಡಾಯ ಜೆಡಿ (ಯು) ನಾಯಕ ಶರದ್ ಯಾದವ್ ಸಂಘಟಿಸಿದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ತೀವ್ರ ದಾಳಿ ನಡೆಸಿ ಹೋದಲೆಲ್ಲಾ ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ ಎಂದು ಗುಡುಗಿದ್ದಾರೆ.
 
ಸಾಂಗ್ಜೀ ವಿರಾಸತ್ ಬಚಾವೊ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಭಾಗವಹಿಸಿರುವ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸುಳ್ಳಿನ ಸರದಾರ ಎಂದು ಕಿಡಿಕಾರಿದರು.
 
ವಿರೋಧ ಪಕ್ಷದ ನಾಯಕರ ಪಕ್ಷಗಳ ಸಮಾವೇಶವನ್ನು "ಭಯಭೀತರ ಒಕ್ಕೂಟ" ಎಂದು ಬಿಜೆಪಿ ತಿರುಗೇಟು ನೀಡಿದೆ.
 
ಪ್ರಧಾನಿ ಮೋದಿಯವರಿಗೆ ಹೆದರಿ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವವರು ಮತ್ತು ಶಿಕ್ಷೆಯ ಭೀತಿ ಎದುರಿಸುತ್ತಿರುವ ವಿಪಕ್ಷಗಳು ಒಕ್ಕೂಟ ರಚಿಸಿವೆ ಎಂದು ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 
 
ಪ್ರಧಾನಿ ಮೋದಿ ನೇತೃತ್ವದ ಸರಕಾರ ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಮೋದಿ ಸ್ವಚ್ಚ ಭಾರತ ಸೃಷ್ಟಿಸಲು ಬಯಸಿದ್ದರು. ಆದರೆ, ಜನತೆ ಸತ್ಯ ಭಾರತವನ್ನು ಬಯಸುತ್ತಿದ್ದಾರೆ ಎಂದು ರಾಹುಲ್ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments